HEALTH TIPS

ಕದನ ವಿರಾಮ | ಜಮ್ಮು ಮತ್ತು ಕಾಶ್ಮೀರ, ಗಡಿಯಲ್ಲಿ ಶಾಂತಿ ನೆಲೆಸಿದೆ: ಭಾರತೀಯ ಸೇನೆ

 ನವದೆಹಲಿ: ಜಮ್ಮು ಮತ್ತು ಕಾಶ್ಮೀರ ಹಾಗೂ ಅಂತರರಾಷ್ಟ್ರೀಯ ಗಡಿಯುದ್ದಕ್ಕೂ ಭಾನುವಾರ ರಾತ್ರಿ ಬಹುತೇಕ ಶಾಂತಿ ನೆಲೆಸಿತ್ತು. ಇತ್ತೀಚಿನ ದಿನಗಳಲ್ಲಿ ಮೊದಲ ಶಾಂತಿಯುತ ರಾತ್ರಿ ಇದಾಗಿದೆ ಎಂದು ಭಾರತೀಯ ಸೇನೆ ಸೋಮವಾರ ತಿಳಿಸಿದೆ.

ಪಹಲ್ಗಾಮ್‌ ದಾಳಿಗೆ ಪ್ರತಿಕಾರವಾಗಿ ಭಾರತೀಯ ಸೇನೆ ಮೇ 7ರಂದು 'ಆಪರೇಷನ್ ಸಿಂಧೂರ' ಕಾರ್ಯಾಚರಣೆ ಆರಂಭಿಸಿತ್ತು.

ಇದರಿಂದ ಭಾರತ ಮತ್ತು ಪಾಕ್‌ ನಡುವೆ ಉದ್ವಿಗ್ನತೆ ಹೆಚ್ಚಿತ್ತು. ಪಾಕಿಸ್ತಾನ ಗಡಿಯಲ್ಲಿ ಅಪ್ರಚೋದಿತ ಗುಂಡಿನ ದಾಳಿ ಹಾಗೂ ಶೆಲ್‌ ದಾಳಿ ನಡೆಸುತ್ತಿತ್ತು. ಉಭಯ ರಾಷ್ಟ್ರಗಳು ಮೇ 10ರಂದು(ಶನಿವಾರ) ಕದನ ವಿರಾಮಕ್ಕೆ ಒಪ್ಪಿಗೆ ಸೂಚಿಸಿದ್ದವು. ಆದಾಗ್ಯೂ ಶನಿವಾರ ರಾತ್ರಿ ಕಾಶ್ಮೀರದಲ್ಲಿ ಸ್ಫೋಟದ ಶಬ್ದ ಕೇಳಿಬಂದಿತ್ತು. ಕದನ ವಿರಾಮ ಉಲ್ಲಂಘನೆಗೆ ತಕ್ಕ ಪ್ರತ್ಯುತ್ತರ ನೀಡಲಾಗುವುದು ಎಂದು ಭಾರತ ಎಚ್ಚರಿಕೆ ನೀಡಿತ್ತು. ಭಾನುವಾರ ಗುಂಡಿನ ದಾಳಿಯಾಗಲಿ, ಶೆಲ್‌ ದಾಳಿಯಾಗಲಿ ನಡೆದ ಬಗ್ಗೆ ವರದಿಯಾಗಿಲ್ಲ ಎಂದು ಸೇನೆ ತಿಳಿಸಿದೆ.

ಹಲವು ದಿನಗಳ ಬಳಿಕ ಪೂಂಚ್ ಮತ್ತು ರಜೌರಿ ಸೇರಿದಂತೆ ಜಮ್ಮು ಪ್ರದೇಶದ ಸ್ಥಳೀಯರು ಕ್ಷಿಪಣಿ ಮತ್ತು ಡ್ರೋನ್ ದಾಳಿಗಳಿಂದ ಮುಕ್ತವಾದ ಶಾಂತಿಯುತ ರಾತ್ರಿಯನ್ನು ಆನಂದಿಸಿದರು. ಅಲ್ಲದೇ ಸೋಮವಾರ ನಿವಾಸಿಗಳು ತಮ್ಮ ಸಾಮಾನ್ಯ ದಿನಚರಿಗೆ ಮರಳಿದ್ದಾರೆ ಎಂದೂ ಸೇನೆ ತಿಳಿಸಿದೆ.


ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

https://drive.google.com/file/d/1xvTBLBh0henjhvlJCaNItofEXO_RJIZu/view?usp=sharing

Below Post Ad

https://drive.google.com/file/d/1xvTBLBh0henjhvlJCaNItofEXO_RJIZu/view?usp=sharing

HOTEL

HOTEL
CENTURY
Qries