HEALTH TIPS

ದಡಾರ-ರುಬೆಲ್ಲಾ ತಡೆಗಟ್ಟುವಿಕೆ ಅಭಿಯಾನ: ಜಿಲ್ಲಾ ಮಟ್ಟದ ಸಮನ್ವಯ ಸಮಿತಿ ಸಭೆ

ಕಾಸರಗೋಡು: ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯದ ನಿರ್ದೇಶ ಪ್ರಕಾರ, ಕೇರಳ ಸರ್ಕಾರವು ಮೇ 2 ರಿಂದ 31 ರವರೆಗೆ ದಡಾರ-ರುಬೆಲ್ಲಾ ತಡೆಗಟ್ಟುವಿಕೆ ಅಭಿಯಾನವನ್ನು ಆಯೋಜಿಸುತ್ತಿದೆ. 

ದಡಾರ-ರುಬೆಲ್ಲಾ ತಡೆಗಟ್ಟುವಿಕೆ ಅಭಿಯಾನದ ಅಂಗವಾಗಿ ಜಿಲ್ಲಾ ಮಟ್ಟದ ಸಮನ್ವಯ ಸಮಿತಿ ಸಭೆರ ಜಿಲ್ಲಾಧಿಕಾರಿ ಚೇಂಬರ್‍ನಲ್ಲಿ ನಡೆಯಿತು. ಜಿಲ್ಲಾಧಿಕಾರಿ ಕೆ.ಇನ್ಬಾಶೇಖರ್ ಅಧ್ಯಕ್ಷತೆ ವಹಿಸಿದ್ದರು. ಡಿಸೆಂಬರ್ 2026 ರ ವೇಳೆಗೆ ದಡಾರ ಮತ್ತು ರುಬೆಲ್ಲಾವನ್ನು ನಿರ್ಮೂಲನೆ ಮಾಡಲು ಸರ್ಕಾರದ ಗುರಿಹೊಂದಿದ್ದು, ಈ ನಿಟ್ಟಿನಲ್ಲಿ ಈ ಅಭಿಯಾನದಲ್ಲಿ ಸಾರ್ವಜನಿಕರು ಸಂಪೂರ್ಣವಾಗಿ ಭಾಗವಹಿಸಬೇಕು ಮತ್ತು ಅಭಿಯಾನದ ಯಶಸ್ಸು ಸಂಪೂರ್ಣವಾಗಿ ಸಾರ್ವಜನಿಕರ ಭಾಗವಹಿಸುವಿಕೆಯ ಮೇಲೆ ಅವಲಂಬಿತವಾಗಿದೆ. ಅಧಿಕಾರಿಗಳು ಮತ್ತು ಆರೋಗ್ಯ ಕಾರ್ಯಕರ್ತರು ಶ್ರಮವಹಿಸಿ ಕೆಲಸ ಮಾಡಬೇಕು ಎಂದು ಜಿಲ್ಲಾಧಿಕಾರಿ ತಿಳಿಸಿದರು. ದಡಾರ-ರುಬೆಲ್ಲಾ ನಿರ್ಮೂಲನೆ ಗುರಿಯನ್ನು ಸಾಧಿಸಲು, ಕಡಿಮೆ ಲಸಿಕೆ ವ್ಯಾಪ್ತಿಯನ್ನು ಹೊಂದಿರುವ ಪ್ರದೇಶ, ವಲಸೆ ಕಾರ್ಮಿಕರ ವಾಸಿಸುವ ಪ್ರದೇಶ ಮತ್ತು ಇತರ ಅಪಾಯಕರ ಪ್ರದೇಶಗಳಲ್ಲಿ ಹೆಚ್ಚಿನ ಗಮನ ಕೇಂದ್ರೀಕರಿಸುವ ಮೂಲಕ ಈ ಅಭಿಯಾನವನ್ನು ಬಲಪಡಿಸಲು ಜಿಲ್ಲಾಧಿಕಾರಿ ಸೂಚಿಸಿದರು.

ಮೇ 17ರಂದು ಎಣ್ಣಪ್ಪಾರ ಕುಟುಂಬ ಆರೋಗ್ಯ ಕೇಂದ್ರದ ವ್ಯಾಪ್ತಿಯಲ್ಲಿರುವ ಪರಿಶಿಷ್ಟ ಪಂಗಡ ಪ್ರದೇಶದಲ್ಲಿ ನಡೆಯುತ್ತಿರುವ ಕೊಲಾಯಕೂಟ ಕಾರ್ಯಕ್ರಮದಲ್ಲಿ ಎಂಆರ್ ಲಸಿಕೆ ಅಭಿಯಾನದ ಜಾಗೃತಿ ಚಟುವಟಿಕೆಗಳನ್ನು ನಡೆಸಲಾಗುವುದು ಎಂದು ಸಭೆಯಲ್ಲಿ ಘೋಷಿಸಲಾಯಿತು. ಅಭಿಯಾನದ ಅಂಗವಾಗಿ ಲಸಿಕೆ ಹಾಕಿಸಿಕೊಳ್ಳದ ಎಲ್ಲಾ ಮಕ್ಕಳಿಗೆ ಲಸಿಕೆ ಹಾಕುವ ಮತ್ತು ಲಸಿಕೆ ಪ್ರಮಾಣವನ್ನು ಶೇಕಡಾ 100 ಕ್ಕೆ ತರುವ ಪ್ರಯತ್ನಗಳನ್ನು ತೀವ್ರಗೊಳಿಸಲು ನಿರ್ಧರಿಸಲಾಗಿದೆ. ಈ ಅಭಿಯಾನವನ್ನು ನಾಲ್ಕು ಹಂತಗಳಲ್ಲಿ ನಡೆಸಲಾಗುತ್ತಿದೆ. ಮೊದಲ ಹಂತದಲ್ಲಿ ಮೇ 2 ರಿಂದ 10 ರವರೆಗೆ ನಡೆಯಲಿದೆ. ಜಿಲ್ಲಾ ಆರ್‍ಸಿಎಚ್ ಅಧಿಕಾರಿ ಡಾ.ಶಾಂಟಿ ಕೆ.ಕೆ. ಮತ್ತು ಡಾ.ಬೇಸಿಲ್ ವರ್ಗೀಸ್ ಅಭಿಯಾನದ ಬಗ್ಗೆ ಮಾಹಿತಿ ನೀಡಿದರು.  ವಿವಿಧ ಇಲಾಖೆಗಳ ಪ್ರತಿನಿಧಿಗಳು ಭಾಗವಹಿಸಿದ್ದರು.



ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

Below Post Ad

Qries