HEALTH TIPS

ಸರ್ವಪಕ್ಷ ನಿಯೋಗದಿಂದ ಹೊರನಡೆದ ಸಂಸದ ಯೂಸುಫ್ ಪಠಾಣ್ - ದೀದಿ ವಿರುದ್ಧ ಬಿಜೆಪಿ ಆರೋಪ !

ಕೋಲ್ಕತ್ತಾ: ಪಶ್ಚಿಮ ಬಂಗಾಳ : ಪಾಕಿಸ್ತಾನದ ಉಗ್ರ ಪೋಷಣೆಯನ್ನು ವಿಶ್ವದ ಮುಂದೆ ಬಹಿರಂಗಪಡಿಸುವ ಗುರಿಯನ್ನು ಹೊಂದಿರುವ ಭಾರತದ ರಾಜತಾಂತ್ರಿಕ ನಿಯೋಗದಿಂದ ತೃಣಮೂಲ ಕಾಂಗ್ರೆಸ್ ಸಂಸದ ಯೂಸುಫ್ ಪಠಾಣ್ ಹೊರಗುಳಿಯುವಂತೆ ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಒತ್ತಾಯಿಸಿದ್ದಾರೆ ಎಂದು ಬಿಜೆಪಿ ಆರೋಪಿಸಿದೆ.

ಆಪರೇಷನ್ ಸಿಂಧೂರದ ನಂತರ ಭಯೋತ್ಪಾದನೆಯ ವಿರುದ್ಧ ಭಾರತದ ಸಂದೇಶವನ್ನು ತಲುಪಿಸಲು ಇತರೆ
30 ದೇಶಗಳಿಗೆ ಭೇಟಿ ನೀಡಲಿರುವ ಈ ಸರ್ವಪಕ್ಷ ನಿಯೋಗದಿಂದ ಪಠಾಣ್ ಹೊರನಡೆದ ಕೆಲವೇ ಗಂಟೆಗಳ ನಂತರ ಬಿಜೆಪಿ ಈ ಆರೋಪ ಮಾಡಿದೆ.

ಕೇಂದ್ರ ಬಿಜೆಪಿ ನೇತೃತ್ವದ ಸರ್ಕಾರ ಈ ನಿಯೋಗದ ಸದಸ್ಯರ ಹೆಸರುಗಳನ್ನು ಅಂತಿಮಗೊಳಿಸುವ ಮೊದಲು ತಮ್ಮ ಪಕ್ಷದೊಂದಿಗೆ ಸಮಾಲೋಚಿಸದೇ ಇರುವುದರಿಂದ ತಮ್ಮ ಯಾವುದೇ ಸಂಸದರು ಈ ತಂಡದ ಭಾಗವಾಗುವುದಿಲ್ಲ ಎಂದು ತೃಣಮೂಲ ಕಾಂಗ್ರೆಸ್ ಘೋಷಿಸಿದೆ.

ಟಿಎಂಸಿ ಸಂಸದರನ್ನು ಸರ್ವಪಕ್ಷ ನಿಯೋಗದಿಂದ ಹಿಂದೆ ಸರಿಯುವಂತೆ ಒತ್ತಾಯಿಸಿದ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರ ನಿರ್ಧಾರ ದುರದೃಷ್ಟಕರ ಎಂದು ಪಶ್ಚಿಮ ಬಂಗಾಳದ ಬಿಜೆಪಿ ಸಹ-ಪ್ರಭಾರಿ ಅಮಿತ್ ಮಾಳವೀಯ ಎಕ್ಸ್‌ನಲ್ಲಿ ಪೋಸ್ಟ್ ಮಾಡಿದ್ದಾರೆ.

ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

Below Post Ad

Qries