HEALTH TIPS

ಸಿರಿಬಾಗಿಲು ವೆಂಕಪ್ಪಯ್ಯ ಸಾಂಸ್ಕøತಿಕ ಭವನದಲ್ಲಿ ಯಕ್ಷಗಾನ ಬಣ್ಣಗಾರಿಕೆ ತರಬೇತಿ ಆರಂಭ

ಕಾಸರಗೋಡು: ಸಿರಿಬಾಗಿಲು ವೆಂಕಪ್ಪಯ್ಯ ಸಾಂಸ್ಕøತಿಕ ಪ್ರತಿಷ್ಠಾನದ ಸಾಂಸ್ಕೃತಿಕ ಭವನದಲ್ಲಿ ಬಣ್ಣಗಾರಿಕೆ ಬಗ್ಗೆ ಶಿಬಿರ ಆರಂಭಗೊಂಡಿತು.  ತೆಂಕುತಿಟ್ಟು ಯಕ್ಷಗಾನದ ಹಿರಿಯ ಯಕ್ಷಗಾನ ಕಲಾವಿದ ಮಾಧವ ಪಾಟಾಳಿ ನೀರ್ಚಾಲು  ಶಿಬಿರ ನಡೆಸಿಕೊಡಲಿದ್ದಾರೆ.

ಸಮಾರಂಭದಲ್ಲಿ ಮಾಧವ ಪಾಟಾಳಿ ಅವರು  ದೀಪ ಪ್ರಜ್ವಲನೆ ಮೂಲಕ ಶಿಬಿರ ಉದ್ಘಾಟಿಸಿದರು. ನಂತರ ಶಿಬಿರಾರ್ಥಿಗಳಿಗೆ ಬಣ್ಣಗಾರಿಕೆ ಕುರಿತು ಮಾರ್ಗದರ್ಶನ ನೀಡಿದರು.  ನಿರಂತರ ನಾಲ್ಕು ದಿನಗಳ ಕಾಲ ಶಿಬಿರ ನಡೆಯಲಿದೆ. ಸಿರಿಬಾಗಿಲು ಪ್ರತಿಷ್ಠಾನದ ಅಧ್ಯಕ್ಷ ರಾಮಕೃಷ್ಣ ಮಯ್ಯ ಸಿರಿಬಾಗಿಲು ಸದಸ್ಯರುಗಳಾದ ಸುಮಿತ್ರಾ ಮಯ್ಯ, ರಾಜ ಮಯ್ಯ ಉಪಸ್ಥಿತರಿದ್ದರು.



ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

Below Post Ad

Qries