HEALTH TIPS

ಭಯೋತ್ಪಾದನೆ ವಿರುದ್ಧ ಜಗತ್ತು ಸ್ವಲ್ಪವೂ ಸಹಿಷ್ಣು ಆಗಬೇಕಿಲ್ಲ: ಎಸ್‌.ಜೈಶಂಕರ್‌

ನವದೆಹಲಿ: ಭಯೋತ್ಪಾದನೆ ವಿರುದ್ಧ ಜಗತ್ತು ಸ್ವಲ್ಪವೂ ಸಹುಷ್ಣು ಆಗಿರಕೂಡದು ಎಂದು ಬ್ರಿಟಿಷ್‌ ವಿದೇಶಾಂಗ ಕಾರ್ಯದರ್ಶಿ ಡೇವಿಡ್‌ ಲ್ಯಾಮಿ ಅವರಿಗೆ ಭಾರತದ ವಿದೇಶಾಂಗ ಸಚಿವ ಎಸ್‌.ಜೈಶಂಕರ್‌ ಹೇಳಿದ್ದಾರೆ. 

ಭಾರತ-ಪಾಕಿಸ್ತಾನದ ನಡುವಿನ ಸಂಘರ್ಷ ಉಲ್ಬಣಿಸಿದರೆ ಯಾರೂ ಗೆಲ್ಲಲಾಗದು ಎಂದು ಲ್ಯಾಮಿ ಹೇಳಿಕೆ ನೀಡಿರುವಂತೆಯೇ ಜೈಶಂಕರ್‌ ಅವರು ಈ ಕರೆ ನೀಡಿರುವುದು ಮಹತ್ವ ಪಡೆದಿದೆ.

ರಷ್ಯಾ ಮತ್ತು ಯುರೋಪಿಯನ್‌ ಒಕ್ಕೂಟಕ್ಕೂ ಜೈಶಂಕರ್‌ ಇದೇ ಸಂದೇಶ ರವಾನಿಸಿದ್ದಾರೆ.

ಈ ಬಗ್ಗೆ 'ಎಕ್ಸ್‌'ನಲ್ಲಿ ಪೋಸ್ಟ್‌ ಮಾಡಿರುವ ಸಚಿವ ಜೈಶಂಕರ್‌, 'ಬ್ರಿಟಿಷ್‌ ವಿದೇಶಾಂಗ ಕಾರ್ಯದರ್ಶಿ ಡೇವಿಡ್‌ ಲ್ಯಾಮಿ ಅವರೊಂದಿಗೆ ದೂರವಾಣಿ ಮೂಲಕ ಮಾತುಕತೆ ನಡೆಸಿದೆ. ಭಯೋತ್ಪಾದನೆ ಹತ್ತಿಕ್ಕುವ ಹಾಗೂ ಅದಕ್ಕಾಗಿ ಅನುಸರಿಸಬೇಕಾದ ಶೂನ್ಯ ಸಹಿಷ್ಣುತೆ ಕುರಿತಂತೆ ನಾವು ಚರ್ಚಿಸಿದೆವು' ಎಂದಿದ್ದಾರೆ.

ಇತ್ತ ಲ್ಯಾಮಿ ಕೂಡ ಪೋಸ್ಟ್‌ ಮಾಡಿ, 'ಭಾರತ-ಪಾಕಿಸ್ತಾನದ ನಡುವಿನ ಸಂಘರ್ಷದ ವಿಚಾರ ಕಳವಳಕಾರಿಯಾಗಿದೆ. ಜೈಶಂಕರ್‌ ಹಾಗೂ ‍ಪಾಕ್‌ ವಿದೇಶಾಂಗ ಸಚಿವ ಇಶಾಕ್‌ ಡಾರ್ ಇಬ್ಬರೊಂದಿಗೂ ನಾನು ಮಾತುಕತೆ ನಡೆಸಿದ್ದೇನೆ. ಸಂಘರ್ಷದ ಬದಲು, ರಾಜತಾಂತ್ರಿಕ ಮಾರ್ಗದ ಮೂಲಕ ಸಮಸ್ಯೆ ಬಗೆಹರಿಸಿಕೊಳ್ಳಲು ಒತ್ತಾಯಿಸಿದ್ದೇನೆ. ಸಂಘರ್ಷ ಉಲ್ಬಣಿಸಿದರೆ ಯಾರೂ ಗೆಲ್ಲಲಾಗದು ಎಂದು ಸ್ಪಷ್ಟವಾಗಿ ತಿಳಿಸಿದ್ದೇನೆ' ಎಂದಿದ್ದಾರೆ.

ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

https://drive.google.com/file/d/1xvTBLBh0henjhvlJCaNItofEXO_RJIZu/view?usp=sharing

Below Post Ad

https://drive.google.com/file/d/1xvTBLBh0henjhvlJCaNItofEXO_RJIZu/view?usp=sharing

HOTEL

HOTEL
CENTURY
Qries