HEALTH TIPS

ಇಂದು ರಂಗಚಿನ್ನಾರಿ ಪ್ರಶಸ್ತಿ ಪ್ರದಾನ ಸಮಾರಂಭ

ಕಾಸರಗೋಡು: ರಂಗ ಚಿನ್ನಾರಿ ಕಾಸರಗೋಡು ವತಿಯಿಂದ  19ನೇ ವರ್ಷದ ರಂಗ ಚಿನ್ನಾರಿ ಪ್ರಶಸ್ತಿ ಪ್ರದಾನ ಸಮಾರಂಭ ಮೇ 24ರಂದು ಸಂಜೆ 3ಕ್ಕೆ ಕಾಸರಗೋಡಿನ ಕರಂದಕ್ಕಾಡು ಪದ್ಮಗಿರಿ ಕಲಾ ಕುಟೀರದಲ್ಲಿ ಜರುಗಲಿದ್ದು, ಖ್ಯಾತ ಪತ್ರಕರ್ತ ರವೀಂದ್ರ ಜೋಷಿ ಮೈಸೂರು ಮುಖ್ಯ ಅತಿಥಿಯಾಗಿ ಭಾಗವಹಿಸುವರು. ಎಡನೀರು ಮಠದ ಶ್ರೀ ಸಚ್ಚಿದಾನಂದ ಭಾರತೀ ಸ್ವಾಮೀಜಿ ಪ್ರಶಸ್ತಿಪ್ರದಾನ ಮಾಡಿ ಆಶೀರ್ವಚನ ನೀಡುವರು. ಯಕ್ಷಗಾನ ಕ್ಷೇತ್ರದಲ್ಲಿ ಯಕ್ಷಕಲಾವಿದ ಮಾಧವ ಪಾಟಾಳಿ ಅವರಿಗೆ ಶ್ರೀ ಎಡನೀರು ಕೇಶವಾನಂದ ಭಾರತೀ ಸ್ಮಾರಕ ಪ್ರಶಸ್ತಿ ನೀಡಲಾಗುವುದು.

ಯಕ್ಷಗಾನ ಕಲಾವಿದ ರಾಮ್ ಎಲ್ಲಂಗಲ ಹಾಗೂ ಸಂಗೀತ ಸಾಧಕಿ ಶಕುಂತಲಾ ಕೃಷ್ಣಭಟ್ ಕುಂಚಿನಡ್ಕ ಅವರಿಗೆ ರಂಗ ಚಿನ್ನಾರಿ ಪರಶಸ್ತಿ, ಸಿನಿಮಾ ಕ್ಷೇತ್ರದಲ್ಲಿ ನಡೆಸಿರುವ ಸಾಧನೆಗಾಗಿ ಕಿರಣ್‍ರಾಜ್ ಹಾಗೂ ಕ್ರೀಡಾ ಕ್ಷೇತ್ರದ ಸಾಧಕಿ ದೀಕ್ಷಾ ಕೆ.ಅವರಿಗೆ ರಂಗಚಿನ್ನಾರಿ ಯುವ ಪ್ರಶಸ್ತಿ ನೀಡಿ ಗೌರವಿಸಲಾಗುವುದು.

 ಧಾರ್ಮಿಕ ಮುಂದಾಳು, ಖ್ಯಾತ ನೇತ್ರ ತಜ್ಞ ಡಾ. ಅನಂತ ಕಾಮತ್ ಅಧ್ಯಕ್ಷತೆ ವಹಿಸುವರು. ಕರ್ನಾಟಕ ತುಳು ಸಾಹಿತ್ಯ ಅಕಾಡಮಿ ಅಧ್ಯಕ್ಷ ತಾರಾನಾಥ ಕಾಪಿಕ್ಕಾಡ್ ಅಭಿನಂದನಾ ಭಾಷಣ ಮಾಡುವರು. 


ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

Below Post Ad

Qries