HEALTH TIPS

ಮಾತೃಗಿರಿ ಶ್ರೀ ರಾಜರಾಜೇಶ್ವರಿ ಭಜನಾ ಮಂದಿರದ ವಾರ್ಷಿಕೋತ್ಸವ

ಮಂಜೇಶ್ವರ: ಮಾತೃಗಿರಿ ಎಲಿಯಾಣ ದೇರಂಬಳ ಶ್ರೀ ರಾಜರಾಜೇಶ್ವರಿ ಭಜನಾ ಮಂದಿರದ ವಾರ್ಷಿಕೋತ್ಸವ ವಿವಿಧ ಧಾರ್ಮಿಕ ಮತ್ತು ಸಾಂಸ್ಕøತಿಕ ಕಾರ್ಯಕ್ರಮಗಳೊಂದಿಗೆ ವಿಜೃಂಭಣೆಯಿಂದ ಜರಗಿತು. ಸೂರ್ಯೋದಯದಿಂದ ಸೂರ್ಯಾಸ್ತದ ತನಕ ವಿವಿಧ ಭಜನಾ ತಂಡಗಳಿಂದ ಭಜನಾ ಸಂಕೀರ್ತನೆ ನಡೆಯಿತು. ರವಿರಾಜ ಬರ್ಲಾಯರ ನೇತೃತ್ವದಲ್ಲಿ ಪ್ರಾತಃಕಾಲ ಗಣಪತಿ ಹವನ, ಹೂವಿನ ಪೂಜೆ ಹಾಗೂ ವಿವಿಧ ಧಾರ್ಮಿಕ ಕಾರ್ಯಕ್ರಮಗಳು ನಡೆಯಿತು. 


ಈ ಸಂದರ್ಭದಲ್ಲಿ ಕೊಂಡೆವೂರು ಶ್ರೀ ಶ್ರೀ ಯೋಗಾನಂದ ಸರಸ್ವತಿ ಸ್ವಾಮೀಜಿ ರವರು ಮಂದಿರಕ್ಕೆ ಭೇಟಿ ನೀಡಿ ಆವರಣ ಚಪ್ಪರವನ್ನು ದೀಪ ಬೆಳಗಿಸುವುದರ ಮೂಲಕ ಲೋಕರ್ಪಣೆಗೈದು ಭಕ್ತರಿಗೆ ಆಶೀರ್ವಾದ ಮಂತ್ರಾಕ್ಷತೆಯನ್ನು ನೀಡಿದರು. ಸಾಂಸ್ಕೃತಿಕ ಕಾರ್ಯಕ್ರಮದ ಅಂಗವಾಗಿ ಹರಿದಾಸ ಶೇಣಿ ಮುರಳಿ ಇವರಿಂದ ಶರಸೇತು ಬಂಧನ ಹರಿಕಥೆ ಸಂಕೀರ್ತನೆ ನಡೆಯಿತು. ಬಳಿಕ ನಡೆದ ಧಾರ್ಮಿಕ ಸಭೆಯ ಅಧ್ಯಕ್ಷತೆಯನ್ನು ಶರತ್ ಕೇಶವ ತೊಟ್ಟೆತ್ತೋಡಿ ವಹಿಸಿದ್ದರು. ಮುಖ್ಯ ಅತಿಥಿಗಳಾದ ಗಂಗಾಧರ ಕೊಂಡೆವೂರು ಅವರು ಧಾರ್ಮಿಕ ಉಪನ್ಯಾಸ ನೀಡಿದರು. ಈ ಸಂದರ್ಭದಲ್ಲಿ ತಮ್ಮ ವೃತ್ತಿನಿಷ್ಠೆಯಿಂದ ಸೇವೆ ಸಲ್ಲಿಸುತ್ತಿರುವ ಡಾ. ಎಸ್ ಎನ್ ಭಟ್ ಮೀಯಪದವು ಹಾಗೂ ಪದ್ಮನಾಭ ಚಿಗುರುಪಾದೆ ಇವರನ್ನು ಮಂದಿರದ  ವತಿಯಿಂದ ಗೌರವಿಸಲಾಯಿತು.ಈ ಸಭಾ ಕಾರ್ಯಕ್ರಮದಲ್ಲಿ ಮಂದಿರ ನಿರ್ಮಾಣಕ್ಕೆ ಭೂಮಿಯನ್ನು ದಾನ ನೀಡಿದ ದಿ. ಪ್ರೇಮಾ ಕೆ ಭಟ್ ರವರಿಗೆ ಶ್ರದ್ಧಾಂಜಲಿ ಅರ್ಪಿಸಲಾಯಿತು. ಕೆ.ವಿ ಭಟ್ ಮೀಯಪದವು, ಸರಸ್ವತಿ ಎಲಿಯಾಣ, ಚಂದ್ರಹಾಸ ಶೆಟ್ಟಿ ದೇರಂಬಳ ಸಭೆಯಲ್ಲಿ ಉಪಸ್ಥಿತರಿದ್ದರು. ಸತೀಶ್ಚಂದ್ರ ರೈ ಸ್ವಾಗತಿಸಿ, ಪವಿತ್ರ ಕೆ ಜಿ ವಂದಿಸಿದರು. ಲಕ್ಷ್ಮೀಶ ಬೊಳುಂಬು ಕಾರ್ಯಕ್ರಮವನ್ನು ನಿರೂಪಿಸಿದರು. ನಂತರ ಸ್ಥಳೀಯ ಪ್ರತಿಭೆಗಳಿಂದ ನೃತ್ಯಾಂಜಲಿ ಕಾರ್ಯಕ್ರಮ ನಡೆಯಿತು.



ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

Below Post Ad

Qries