HEALTH TIPS

ಮಣಿಪುರ: ಪರಿಸ್ಥಿತಿ ನಿರ್ವಹಿಸುವಲ್ಲಿ ಗೃಹ ಸಚಿವ ಅಮಿತ್ ಶಾ ವಿಫಲ; ಕಾಂಗ್ರೆಸ್

ನವದೆಹಲಿ: ಜನಾಂಗೀಯ ಸಂಘರ್ಷದ ಮಣಿಪುರದಲ್ಲಿ ಪರಿಸ್ಥಿತಿ ನಿರ್ವಹಿಸುವಲ್ಲಿ ಕೇಂದ್ರ ಗೃಹ ಸಚಿವ ಅಮಿತ್ ಶಾ ವಿಫಲರಾಗಿದ್ದಾರೆ ಎಂದು ಕಾಂಗ್ರೆಸ್‌ ಆರೋಪಿಸಿದೆ. 

ಕಾಂಗ್ರೆಸ್‌ ಪ್ರಧಾನ ಕಾರ್ಯದರ್ಶಿ ಜೈರಾಮ್ ರಮೇಶ್ ಸಾಮಾಜಿಕ ಮಾಧ್ಯಮ ಎಕ್ಸ್‌ನಲ್ಲಿ ಪೋಸ್ಟ್‌ ಹಾಕುವ ಮೂಲಕ ಗಂಭೀರ ಆರೋಪ ಮಾಡಿದ್ದಾರೆ.

2022ರಲ್ಲಿ ಬಿಜೆಪಿ ಮಣಿಪುರದಲ್ಲಿ ಭಾರಿ ಜನಾದೇಶದೊಂದಿಗೆ ಸರ್ಕಾರ ರಚನೆ ಮಾಡಿತು. ಆದರೆ ಜನಾಂಗೀಯ ಗಲಭೆಯನ್ನು ನಿಯಂತ್ರಿಸುವಲ್ಲಿ ವಿಫಲವಾಗಿ ಅಧಿಕಾರದಿಂದ ದೂರ ಸರಿಯಿತು ಎಂದರು.

ನಮ್ಮದು ಡಬಲ್ ಎಂಜಿನ್ ಸರ್ಕಾರ ಎಂದು ಹೇಳುವ ಬಿಜೆಪಿಗೆ, ಮಣಿಪುರ ಜನರ ಕಷ್ಟಗಳು ಅರ್ಥವಾಗುತ್ತಿಲ್ಲ, ರಾಜ್ಯದಲ್ಲಿ ಸಾಂವಿಧಾನಿಕ ಆಡಳಿತ ಸ್ಥಗಿತಗೊಂಡಿದ್ದು ಜನರು ಅಸಹಾಯಕರಾಗಿದ್ದಾರೆ. ಮಣಿಪುರದಲ್ಲಿ ಶಾಂತಿ ಸ್ಥಾಪಿಸಿ, ರಾಜ್ಯವನ್ನು ಸಹಜಸ್ಥಿತಿಗೆ ತರಲು ಬಿಜೆಪಿಯಿಂದ ಸಾಧ್ಯವಾಗಿಲ್ಲ ಎಂದರು.

ಪ್ರಧಾನಿ ನರೇಂದ್ರ ಮೋದಿ ಅವರು ಮಣಿಪುರ ನಿರ್ಲಕ್ಷಿಸುವುದನ್ನು ಮುಂದುವರೆಸಿದ್ದಾರೆ. ವಿದೇಶ ಸುತ್ತುವ ಅವರಿಗೆ ಇದುವರೆಗೂ ರಾಜ್ಯಕ್ಕೆ ಭೇಟಿ ಕೊಡಲು ಸಾಧ್ಯವಾಗಿಲ್ಲ ಎಂದು ಜೈರಾಮ್ ರಮೇಶ್ ಹೇಳಿದ್ದಾರೆ.

ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

Below Post Ad

Qries