HEALTH TIPS

ಪ್ರೇಮಾ. ಕೆ. ಭಟ್. ತೊಟ್ಟೆತ್ತೋಡಿ ನಿಧನಕ್ಕೆ ಸಂತಾಪ

ಮಂಜೇಶ್ವರ: ಮೀಯಪದವು ಶ್ರೀ ವಿದ್ಯಾವರ್ಧಕ ಹೈಯರ್ ಸೆಕೆಂಡರಿ ಶಾಲೆ ಹಾಗೂ ಶ್ರೀ ವಾಣಿವಿಲಾಸ ಶಾಲೆ ತೊಟ್ಟೆತ್ತೋಡಿ ಇದರ ಸಂಚಾಲಕರೂ, ಚಿಗುರುಪಾದೆ ಶ್ರೀ ಮಹಾಲಿಂಗೇಶ್ವರ ದೇವಸ್ಥಾನ ಸೇವಾ ಟ್ರಸ್ಟ್ ಹಾಗೂ ಬುಡ್ರಿಯ ಮಲರಾಯ ಬಂಟ ಕ್ಷೇತ್ರದ ಅಧ್ಯಕ್ಷರೂ ಆಗಿದ್ದ ಪ್ರೇಮಾ. ಕೆ. ಭಟ್. ತೊಟ್ಟೆತ್ತೋಡಿ ಇವರ ನಿಧನಕ್ಕೆ ಸಂತಾಪ ಸೂಚಕ ಸಭೆ ಮೀಯಪದವು ಶ್ರೀ ವಿದ್ಯಾವರ್ಧಕ ಹೈಯರ್ ಸೆಕೆಂಡರಿ ಶಾಲೆಯ ಸಭಾಂಗಣದಲ್ಲಿ ನಡೆಯಿತು. ಡಾ. ಚಂದ್ರಶೇಖರ ಚೌಟ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿ, ಅವರ ಅಗಲುವಿಕೆಯು ಸಾಮಾಜಿಕ, ಸಾಂಸ್ಕøತಿಕ, ಶೈಕ್ಷಣಿಕ ಕ್ಷೇತ್ರಕ್ಕೆ ತುಂಬಲಾರದ ನಷ್ಟ ಎಂದರು.

ಮೀಂಜ ಗ್ರಾಮ ಪಂಚಾಯತಿ ಅಧ್ಯಕ್ಷ ಸುಂದರಿ. ಆರ್. ಶೆಟ್ಟಿ, ಆರೋಗ್ಯ ಮತ್ತು ವಿದ್ಯಾಭ್ಯಾಸ ಸ್ಥಾಯಿ ಸಮಿತಿ ಅಧ್ಯಕ್ಷೆ ಸರಸ್ವತಿ,  ಸದಸ್ಯರಾದ ರುಕಿಯಾ ಸಿದ್ದಿಕ್, ಮಿಸಿರಿಯ, ನಿವೃತ್ತ ಮುಖ್ಯೋಪಾಧ್ಯಾಯ ಕೆ. ಟಿ. ಭಟ್, ನಿವೃತ್ತ ಅಧ್ಯಾಪಕ ರಾಜಾರಾಮ್ ರಾವ್, ಶ್ರೀ ವಿದ್ಯಾವರ್ಧಕ ಹಿರಿಯ ಪ್ರಾಥಮಿಕ ಶಾಲೆಯ ಸಂಚಾಲಕ ಶ್ರೀಧರ ರಾವ್, ಶರತ್ ಕೇಶವ ತೊಟ್ಟೆತ್ತೋಡಿ, ಶ್ರೀ ವಿದ್ಯಾವರ್ಧಕ ಹಿರಿಯ ಪ್ರಾಥಮಿಕ ಶಾಲೆಯ ಮುಖ್ಯೋಪಾಧ್ಯಾಯ ಅರವಿಂದಾಕ್ಷ ಭಂಡಾರಿ, ತೊಟ್ಟೆತ್ತೋಡಿ ಶ್ರೀ ವಾಣಿವಿಲಾಸ ಶಾಲೆಯ ಮುಖ್ಯೋಪಾಧ್ಯಾಯ ರಾಜೇಶ್ವರಿ ರಾವ್ ಮುಂತಾದವರು ಭಾಗವಹಿಸಿ ಪ್ರೇಮಾ. ಕೆ. ಭಟ್ ಅವರ ಸಾಧನೆಗಳನ್ನು ಸ್ಮರಿಸಿ ನುಡಿನಮನ ಸಲ್ಲಿಸಿದರು. ಅಧ್ಯಾಪಕ ಕಿರಣ್ ಪ್ರಾಸ್ತಾವಿಕ ಮಾತುಗಳನ್ನಾಡಿದರು. ಮುಖ್ಯೋಪಾಧ್ಯಾಯಿನಿ ಮೃದುಲ. ಕೆ.ಎಂ ವಂದಿಸಿದರು. ವಿವಿಧ ಕ್ಷೇತ್ರದ ಗಣ್ಯರು ಉಪಸ್ಥಿತರಿದ್ದು ಪ್ರೇಮಾ. ಕೆ. ಭಟ್ ಅವರ ಭಾವಚಿತ್ರಕ್ಕೆ ಗೌರವದ ಪುಷ್ಪ ನಮಗಳನ್ನು ಸಲ್ಲಿಸಿದರು.



ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

Below Post Ad

Qries