ನವದೆಹಲಿ: ವಿವಿಧ ಸಮುದಾಯದ ಜನರ ಸಾಮಾಜಿಕ ಸ್ಥಾನಮಾನ, ಸರ್ಕಾರಿ ಹಾಗೂ ಖಾಸಗಿ ಕ್ಷೇತ್ರಗಳಲ್ಲಿ ಹೊಂದಿರುವ ಉದ್ಯೋಗದ ಮಾಹಿತಿ ತಿಳಿಯಲು ಜಾತಿಗಣತಿ ಅತಿಮುಖ್ಯ ಎಂದು ಕೇಂದ್ರ ಸಚಿವ ರಾಮದಾಸ್ ಅಠವಳೆ ಬುಧವಾರ ಹೇಳಿದ್ದಾರೆ.
ಸಾಮಾಜಿಕ ನ್ಯಾಯ ಮತ್ತು ಸಬಲೀಕರಣ ಖಾತೆಯ ರಾಜ್ಯ ಸಚಿವ ಅಠವಳೆ ಮಾಧ್ಯಮಗೋಷ್ಠಿಯಲ್ಲಿ ಮಾತನಾಡಿದ್ದು, ಹಲವು ವರ್ಷಗಳಿಂದ ಜಾತಿಗಣತಿಗಾಗಿ ಬೇಡಿಕೆ ಇಟ್ಟಿದ್ದಾಗಿ ಹೇಳಿದ್ದಾರೆ.




