HEALTH TIPS

'ಆಪರೇಷನ್ ಸಿಂಧೂರ': ಜಮ್ಮುವಿನ ಸೇನಾ ಆಸ್ಪತ್ರೆಗೆ ಭೇಟಿ ನೀಡಿದ ಜಿತೇಂದ್ರ ಸಿಂಗ್‌

ಜಮ್ಮು: ಕೇಂದ್ರ ಸಚಿವ ಜಿತೇಂದ್ರ ಸಿಂಗ್‌ ಅವರು ಭಾನುವಾರ ಇಲ್ಲಿನ ಸೇನಾ ಆಸ್ಪತ್ರೆಗೆ ಭೇಟಿ ನೀಡಿ, ಗಾಯಗೊಂಡ ಯೋಧರ ಆರೋಗ್ಯ ವಿಚಾರಿಸಿದರು.

'ಆಪರೇಷನ್ ಸಿಂಧೂರ' ಬಳಿಕ ಪಾಕಿಸ್ತಾನದ ಜೊತೆಗೆ ಸಂಘರ್ಷದಲ್ಲಿ ಯೋಧರು ಗಾಯಗೊಂಡು ಆಸ್ಪತ್ರೆಗೆ ದಾಖಲಾಗಿದ್ದರು.

ಗಾಯಗೊಂಡ ಯೋಧರ ಧೈರ್ಯ, ಹೋರಾಟವನ್ನು ಶ್ಲಾಘಿಸಿದ ಅವರು, ದಾಳಿ ವೇಳೆ ಸರಿಯಾದ ಸಮಯಕ್ಕೆ ಚಿಕಿತ್ಸೆ ನೀಡಿದ ಬ್ರಿಗೇಡಿಯರ್‌ ಫಯಾಜ್‌ ಅಹಮ್ಮದ್‌ ನೇತೃತ್ವದ ವೈದ್ಯಕೀಯ ಸಿಬ್ಬಂದಿಯ ಸೇವೆಗೆ ಮೆಚ್ಚುಗೆ ವ್ಯಕ್ತಪಡಿಸಿದರು.

'ಗಾಯಗೊಂಡು ಸೇನಾ ಆಸ್ಪತ್ರೆಗೆ ದಾಖಲಾದ ಯೋಧರನ್ನು ಇತ್ತೀಚಿಗೆ ಭೇಟಿಯಾದೆ. ಅವರ ಹೋರಾಟ, ಧೈರ್ಯ ಗಮನಿಸಿ, ನಾನು ನಿಜಕ್ಕೂ ವಿನೀತನಾಗಿದ್ದೇನೆ. ದೇಶವೂ ಅವರಿಗೆ ಋಣಿಯಾಗಿದೆ ಎಂದು ಭಾವಿಸಿದ್ದೇನೆ' ಎಂದು ಭೇಟಿ ಬಳಿಕ ಮಾಧ್ಯಮಗಳಿಗೆ ತಿಳಿಸಿದರು.

ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

Below Post Ad

Qries