HEALTH TIPS

WAQF LAW ವಿರುದ್ಧದ ಹೊಸ ಅರ್ಜಿ: 'ಎಲ್ಲರಿಗೂ ಪತ್ರಿಕೆಯಲ್ಲಿ ಹೆಸರು ಬೇಕು' ಎಂದ ಸುಪ್ರೀಂ

ನವದೆಹಲಿ: ವಕ್ಫ್ ತಿದ್ದುಪಡಿ ಕಾಯ್ದೆ, 2025ರ ಸಾಂವಿಧಾನಿಕ ಸಿಂಧುತ್ವವನ್ನು ಪ್ರಶ್ನಿಸಿ ಸಲ್ಲಿಸಲಾದ ಒಂದೆರಡು ಹೊಸ ಅರ್ಜಿಗಳನ್ನು ಪರಿಶೀಲಿಸಲು ಸುಪ್ರೀಂ ಕೋರ್ಟ್ ಶುಕ್ರವಾರ ನಿರಾಕರಿಸಿದ್ದು, ಎಲ್ಲರೂ ಪತ್ರಿಕೆಗಳಲ್ಲಿ ಹೆಸರು ಪ್ರಕಟವಾಗಬೇಕೆಂದು ಬಯಸುತ್ತಾರೆ ಎಂದು ಹೇಳಿದೆ.

ಮುಖ್ಯ ನ್ಯಾಯಮೂರ್ತಿ ಬಿ.ರ್. ಗವಾಯಿ ಮತ್ತು ನ್ಯಾಯಮೂರ್ತಿ ಆಗಸ್ಟೀನ್ ಜಾರ್ಜ್ ಮಸಿಹ್ ಅವರನ್ನೊಳಗೊಂಡ ಪೀಠವು ಮೇ 20 ರಂದು ಬಾಕಿ ಇರುವ ಅರ್ಜಿಗಳ ಕುರಿತು ವಿಚಾರಣೆ ನಡೆಸುವುದಾಗಿ ಹೇಳಿದೆ.

ವಕ್ಫ್ ತಿದ್ದುಪಡಿ ಕಾಯ್ದೆ,ಯ ಸಾಂವಿಧಾನಿಕ ಸಿಂಧುತ್ವ ಪ್ರಶ್ನಿಸಿ ಶುಕ್ರವಾರ ಒಂದು ಅರ್ಜಿ ವಿಚಾರಣೆಗೆ ಬಂದ ತಕ್ಷಣ, ಕೇಂದ್ರದ ಪರವಾಗಿ ಹಾಜರಾದ ಸಾಲಿಸಿಟರ್ ಜನರಲ್ ತುಷಾರ್ ಮೆಹ್ತಾ ಆಕ್ಷೇಪ ವ್ಯಕ್ತಪಡಿಸಿದರು. ಈ ಕುರಿತಂತೆ ಅಂತ್ಯವಿಲ್ಲದಷ್ಟು ಅರ್ಜಿಗಳ ಸಲ್ಲಿಕೆಗೆ ಅನುಮತಿ ನೀಡಬಾರದು ಎಂದು ಕೋರಿದರು.

ಅರ್ಜಿದಾರರ ಪರ ಹಾಜರಾದ ವಕೀಲರು ಏಪ್ರಿಲ್ 8ರಂದು ಅರ್ಜಿ ಸಲ್ಲಿಸಿರುವುದಾಗಿ ಮತ್ತು ಏಪ್ರಿಲ್ 15ರಂದು ಸುಪ್ರೀಂ ಕೋರ್ಟ್ ರಿಜಿಸ್ಟ್ರಿ ಸೂಚಿಸಿದ ದೋಷಗಳನ್ನು ತೆಗೆದುಹಾಕಲಾಗಿದೆ. ಆದರೂ, ನಮ್ಮ ಅರ್ಜಿಯನ್ನು ವಿಚಾರಣೆಗೆ ಪಟ್ಟಿ ಮಾಡಲಾಗಿಲ್ಲ ಎಂದರು.

ಇದಕ್ಕೆ ಪ್ರತಿಕ್ರಿಯಿಸಿದ ಸಿಜೆಐ, ಪ್ರತಿಯೊಬ್ಬರಿಗೂ ದಿನಪತ್ರಿಕೆಯಲ್ಲಿ ಹೆಸರು ಬರಬೇಕೆಂಬ ಬಯಕೆ ಇದೆ ಎಂದರು.

ಈಗ ಬಾಕಿ ಇರುವ ಅರ್ಜಿಗಳ ಜೊತೆ ವಿಚಾರಣೆಗೆ ಪರಿಗಣಿಸಬೇಕು ಎಂಬ ವಕೀಲರ ವಾದ ತಳ್ಳಿಹಾಕಿದ ನ್ಯಾಯಾಲಯ ಅರ್ಜಿಯನ್ನು ವಜಾಗೊಳಿಸಿತು. ಇದೇವೇಳೆ, ಸಲ್ಲಿಸಲಾದ ಮತ್ತೊಂದು ಅರ್ಜಿಯನ್ನೂ ವಜಾಗೊಳಿಸಲಾಯಿತು.

ವಕ್ಫ್ ತಿದ್ದುಪಡಿ ಕಾಯ್ದೆ ಪ್ರಶ್ನಿಸಿ ತನ್ನ ಮುಂದೆ ಇರುವ ಒಟ್ಟು ಅರ್ಜಿಗಳಲ್ಲಿ ಕೇವಲ ಐದು ಅರ್ಜಿಗಳನ್ನು ಮಾತ್ರ ವಿಚಾರಣೆ ಮಾಡಲು ಏಪ್ರಿಲ್ 17ರಂದು ಸುಪ್ರೀಂ ಕೋರ್ಟ್ ನಿರ್ಧರಿಸಿತ್ತು.

ಈ ಅರ್ಜಿಗಳು ಮೇ 15ರಂದು ಸಿಜೆಐ ಮತ್ತು ನ್ಯಾಯಮೂರ್ತಿ ಮಸಿಹ್ ಅವರನ್ನೊಳಗೊಂಡ ಪೀಠದ ಮುಂದೆ ವಿಚಾರಣೆಗೆ ಬಂದವು.

ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

Below Post Ad

Qries