HEALTH TIPS

ಜಮ್ಮು-ಕಾಶ್ಮೀರ: ಪಹಲ್ಗಾಮ್‌ ದಾಳಿ ಬಳಿಕ ಬಂದ್ ಆಗಿದ್ದ 16 ಪ್ರವಾಸಿ ತಾಣಗಳು ಮುಕ್ತ

ಶ್ರೀನಗರ: ಪಹಲ್ಗಾಮ್‌ ಭಯೋತ್ಪಾದಕ ದಾಳಿಯ ಬಳಿಕ ಮುಚ್ಚಲಾಗಿದ್ದ 16 ಪ್ರವಾಸಿ ತಾಣಗಳನ್ನು ಜಮ್ಮು ಮತ್ತು ಕಾಶ್ಮೀರದ ಆಡಳಿತವು ಪ್ರವಾಸಿಗರಿಗೆ ಮುಕ್ತಗೊಳಿಸಿದೆ. ಈ ಪ್ರದೇಶಗಳಲ್ಲಿನ ಭದ್ರತಾ ಪರಿಸ್ಥಿತಿಯನ್ನು ಪರಿಶೀಲಿಸಿದ ಬಳಿಕ ಸರ್ಕಾರ ಈ ಕ್ರಮ ತೆಗೆದುಕೊಂಡಿದೆ.

ಏಪ್ರಿಲ್‌ 22ರಂದು ಪಹಲ್ಗಾಮ್‌ನಲ್ಲಿ ನಡೆದಿದ್ದ ಭಯೋತ್ಪಾದಕ ದಾಳಿಯಲ್ಲಿ 25 ಪ್ರವಾಸಿಗರು ಮತ್ತು ಒಬ್ಬ ಸ್ಥಳೀಯ ವ್ಯಕ್ತಿ ಮೃತಪಟ್ಟಿದ್ದರು. ಆ ಬಳಿಕ ಭದ್ರತಾ ಕಾರಣಗಳಿಗಾಗಿ 40ಕ್ಕೂ ಹೆಚ್ಚು ಪ್ರವಾಸಿ ತಾಣಗಳನ್ನು ಬಂದ್‌ ಮಾಡಲಾಗಿತ್ತು.

ದಕ್ಷಿಣ ಕಾಶ್ಮೀರದ ಅನಂತನಾಗ್‌ ಜಿಲ್ಲೆಯ ಪ್ರಸಿದ್ಧ ಪ್ರವಾಸಿ ತಾಣಗಳಾದ ಬೆತಾಬ್‌ ಕಣಿವೆ, ಪಹಲ್ಗಾಮ್‌ನಲ್ಲಿರುವ ಉದ್ಯಾನಗಳು, ವೆರಿನಾಗ್ ಉದ್ಯಾನ, ಕೊಕರ್ನಾಗ್‌ ಉದ್ಯಾನ, ಅಚಾಬಲ್‌ ಉದ್ಯಾನ ಸೇರಿ 16 ತಾಣಗಳನ್ನು ಪ್ರವಾಸಿಗರಿಗೆ ಮುಕ್ತಗೊಳಿಸಲಾಗಿದೆ. ಭದ್ರತಾ ಪರಿಶೀಲನೆ ಬಳಿಕ ಉಳಿದ ತಾಣಗಳನ್ನು ಹಂತ ಹಂತವಾಗಿ ತೆರವುಗೊಳಿಸಲಾಗುವುದು ಎಂದು ಸರ್ಕಾರ ಮಾಹಿತಿ ನೀಡಿದೆ.

ಪ್ರವಾಸಿ ತಾಣಗಳನ್ನು ಮುಕ್ತಗೊಳಿಸುತ್ತಿರುವುದು ಒಳ್ಳೆಯ ಬೆಳವಣಿಗೆ. ಆದರೆ ಭಯೋತ್ಪಾದಕ ದಾಳಿಯ ಬಳಿಕ ಪ್ರವಾಸಿಗರಲ್ಲಿ ಆತಂಕ ನಿವಾರಿಸುವ ಮತ್ತು ಪುನಃ ವಿಶ್ವಾಸವನ್ನು ಮೂಡಿಸುವ ಕೆಲಸ ಆಗಬೇಕಿದೆ. ಈ ನಿಟ್ಟಿನಲ್ಲಿ ಪ್ರಯತ್ನಗಳು ನಡೆಯಬೇಕಿದೆ ಎಂದು ಪ್ರವಾಸ ನಿರ್ವಾಹಕರು ಹೇಳುತ್ತಾರೆ.

'ಪ್ರವಾಸಿಗರು ಭದ್ರತೆ, ಸುರಕ್ಷತೆ ಕುರಿತು ಹೇಳಿಕೆಗಳಿಗಿಂತ ಹೆಚ್ಚಿನದ್ದನ್ನು ಬಯಸುತ್ತಾರೆ. ತ್ವರಿತವಾಗಿ ಸ್ಪಂದಿಸುವ ತಂಡಗಳು, ಕಟ್ಟುನಿಟ್ಟಾದ ಬಂದೋಬಸ್ತ್‌ ವ್ಯವಸ್ಥೆ ಗೋಚರಿಸುವಂತಿರಬೇಕು ಎಂದು ಅವರು ನಿರೀಕ್ಷಿಸುತ್ತಾರೆ' ಎಂದು ಅವರು ತಿಳಿಸುತ್ತಾರೆ.

ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

Below Post Ad

Qries