ಕಾಸರಗೋಡು: ಮದ್ಯವರ್ಜನ ಶಿಬಿರ ವ್ಯವಸ್ಥಾಪನಾ ಸಮಿತಿ ಅಣಂಗೂರು ಕಾಸರಗೋಡು ತಾಲೂಕು ಇದರ ಆಶ್ರಯದಲ್ಲಿ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ.ಸಿ ಟ್ರಸ್ಟ್ (ರಿ.) ಕಾಸರಗೋಡು ತಾಲೂಕು, ಅಖಿಲ ಕರ್ನಾಟಕ ಜನಜಾಗೃತಿ ವೇದಿಕೆ ಟ್ರಸ್ಟ್ (ರಿ.) ಬೆಳ್ತಂಗಡಿ, ಜಿಲ್ಲಾ ನವಜೀವನ ಸಮಿತಿ ಕಾಸರಗೋಡು, ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ವ್ಯಸನಮುಕ್ತಿ ಮತ್ತು ಸಂಶೋಧನಾ ಕೇಂದ್ರ ಲಾಯಿಲ ಉಜಿರೆ, ಕರ್ನಾಟಕ ರಾಜ್ಯ ಮದ್ಯಪಾನ ಸಂಯಮ ಮಂಡಳಿ ಬೆಂಗಳೂರು ಇವರ ಮಾರ್ಗದರ್ಶನದೊಂದಿಗೆ ಪ್ರಗತಿಬಂಧು ಸ್ವ-ಸಹಾಯ ಸಂಘಗಳ ಒಕ್ಕೂಟ ಕಾಸರಗೋಡು ತಾಲೂಕು, ನಗರ ಸಭೆ ಕಾಸರಗೋಡು, ತಾಲೂಕು ಆರೋಗ್ಯ ಕೇಂದ್ರ ಕಾಸರಗೋಡು, ಆರಕ್ಷಕ ಠಾಣೆ ಕಾಸರಗೋಡು, ಶ್ರೀ ಧರ್ಮಸ್ಥಳ ಶೌರ್ಯ ವಿಪತ್ತು ನಿರ್ವಹಣಾ ಘಟಕ ಕಾಸರಗೋಡು ತಾಲೂಕು, ಸ್ಥಳೀಯ ಸಂಘ ಸಂಸ್ಥೆಗಳು ಮತ್ತು ಊರಿನ ದಾನಿಗಳ ಸಹಕಾರದೊಂದಿಗೆ ಪರಮಪೂಜ್ಯ ರಾಜರ್ಷಿ ಡಾII ಡಿ. ವೀರೇಂದ್ರ ಹೆಗ್ಗಡೆಯವರು ಮತ್ತು ಮಾತೃಶ್ರೀ ಡಾ. ಹೇಮಾವತಿ ವಿ. ಹೆಗ್ಗಡೆಯವರ ಕೃಪಾಶೀರ್ವಾದಗಳೊಂದಿಗೆ 1930ನೇ ಮದ್ಯವರ್ಜನ ಶಿಬಿರದ ಉದ್ಘಾಟನಾ ಸಮಾರಂಭ ಶ್ರೀ ಶಾರದಾಂಬ ಕಲ್ಯಾಣ ಮಂಟಪ ಅಣಂಗೂರು ಕಾಸರಗೋಡು ನಲ್ಲಿ ನಡೆಯಿತು.
ಕಾರ್ಯಕ್ರಮದ ಉದ್ಘಾಟನೆಯನ್ನು ಶಾಸಕ ಎನ್. ಎ. ನೆಲ್ಲಿಕುನ್ನು ನೆರವೇರಿಸಿ ಮಾತನಾಡಿ ಶುಭಹಾರೈಸಿದರು.
ಜನಜಾಗೃತಿ ವೇದಿಕೆ ಕಾಸರಗೋಡು ತಾಲೂಕು ಅಧ್ಯಕ್ಷ ಅಖಿಲೇಶ್ ನಗುಮುಗಂ ಸಭಾಧ್ಯಕ್ಷತೆ ವಹಿಸಿದ್ದರು. ಅಖಿಲ ಕರ್ನಾಟಕ ಜನಜಾಗೃತಿ ವೇದಿಕೆ ಪ್ರಾದೇಶಿಕ ವಿಭಾಗ ಯೋಜನಾಧಿಕಾರಿ ಗಣೇಶ್ ಆಚಾರ್ಯ ಅವರು, ಜನಜಾಗೃತಿ ವೇದಿಕೆ ಪ್ರಾರಂಭ, ಜನಜಾಗೃತಿ ವೇದಿಕೆ ಮೂಲಕ ಸಾಮಾಜಿಕ ಆಂದೋಲನ, ಮದ್ಯವರ್ಜನ ಶಿಬಿರ ಅನುಷ್ಠಾನ, ಮದ್ಯವರ್ಜನ ಶಿಬಿರದ ರೂಪುರೇಷೆ, ಮದ್ಯವರ್ಜನ ಶಿಬಿರದ ದೈನಂದಿನ ದಿನಚರಿ ಕಾರ್ಯಕ್ರಮಗಳ ಕುರಿತು ಪ್ರಾಸ್ತಾವಿಕವಾಗಿ ಮಾತನಾಡಿದರು.
ಮುಖ್ಯ ಅತಿಥಿಗಳಾಗಿ ಉಪಸ್ಥಿತರಿದ್ದ ಜನಜಾಗೃತಿ ವೇದಿಕೆಯ ಮಾಜಿ ಜಿಲ್ಲಾಧ್ಯಕ್ಷ ಗೋಪಲ ಶೆಟ್ಟಿ ಅರಿಬೈಲು ಅವರು ಮಾತನಾಡಿ, ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ನಡೆಸುತ್ತಿರುವ ಮದ್ಯವರ್ಜನ ಶಿಬಿರದಿಂದ ಸಾವಿರಾರು ಕುಟುಂಬಗಳ ಕಣ್ಣೀರನ್ನು ಒರೆಸಿ ಅವರ ಬದುಕಿಗೆ ಬೆಳಕನ್ನು ತೋರಿಸುವ ಕೆಲಸ ಮಾಡುತ್ತಿದೆ ಎಂದರು.
ನಗರಸಭಾ ಸದಸ್ಯ ಪಿ. ರಮೇಶ್, ಜೀವನಾಥ್ ಕೆ. ಜೋಡುಕಟ್ಟೆ ಕಿದೂರು, ಮಂಜೇಶ್ವರ ತಾಲೂಕು ಜನಜಾಗೃತಿ ವೇದಿಕೆ ಅಧ್ಯಕ್ಷ ಡಾ.ಜಯಪ್ರಕಾಶ್ ನಾರಾಯಣ ತೊಟ್ಟತ್ತೋಡಿ, ದಕ್ಷಿಣ ಕನ್ನಡ 2 ಜಿಲ್ಲಾ ನಿರ್ದೇಶಕ ಬಾಬು ನಾಯ್ಕ ಮಾತನಾಡಿದರು.
1930ನೇ ವ್ಯವಸ್ಥಾಪನಾ ಸಮಿತಿ ಕಾಸರಗೋಡು ಅಧ್ಯಕ್ಷ ಉದಯ್ ಕುಮಾರ್, ಹರೀಶ್, ಡಾ. ಗಾಯತ್ರೀ ಯು., ಡಾ. ವೆಂಕಟ್ರಮಣ ಹೊಳ್ಳ ಕಾಸರಗೋಡು, ಪ್ರೊ.ಎ. ಶ್ರೀನಾಥ್ ಉಪಸ್ಥಿತರಿದ್ದರು.
ಶಿಬಿರಾಧಿಕಾರಿ ದೇವಿಪ್ರಸಾದ್, ನೇತ್ರಾವತಿ ಆರೋಗ್ಯ ಸಹಾಯಕಿ, ವಲಯದ ಅಧ್ಯಕ್ಷ ಸೂರಜ್ ಶೆಟ್ಟಿ, ಯೋಗ ಶಿಕ್ಷಕಿ ತೇಜ ಹರೀಶ್ ಕರಂದಕ್ಕಾಡ್, ನಿತೇಶ್ ಕೆ. ಉಪಸ್ಥಿತರಿದ್ದರು. ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ.ಸಿ ಟ್ರಸ್ಟ್ (ರಿ.) ಕಾಸರಗೋಡು ವಲಯದ ಮೇಲ್ವಿಚಾರಕರು ಸೇವಾ ಪ್ರತಿನಿಧಿಗಳು ಒಕ್ಕೂಟದ ಅಧ್ಯಕ್ಷರು, ಪದಾಧಿಕಾರಿಗಳು, ಪ್ರಗತಿಬಂಧು ಸ್ವ-ಸಹಾಯ ಸಂಘದ ಸದಸ್ಯರುಗಳು, ನವಜೀವನ ಸಮಿತಿ ಸದಸ್ಯರುಗಳು, ಶೌರ್ಯ ಸ್ವಯಂಸೇವಕರು ಮತ್ತು ಸಾರ್ವಜನಿಕರು ಕಾರ್ಯಕ್ರಮದ ಯಶಸ್ವಿಗೆ ಸಹಕರಿಸಿದರು.
ತಾಲೂಕು ಯೋಜನಾಧಿಕಾರಿ ದಿನೇಶ್ ಬಿ. ಸ್ವಾಗತಿಸಿ,ನವಜೀವನ ಸಮಿತಿ ಸದಸ್ಯರಾದ ಬಿಜು ವಂದಿಸಿದರು. ಮೇಲ್ವಿಚಾರಕ ಗೋಪಾಲಕೃಷ್ಣ ನಿರೂಪಿಸಿದರು.




.jpg)

