HEALTH TIPS

Ahmedabad Plane Crash | ವಿಮಾನ ದುರಂತ: ಕೊನೇ ವ್ಯಕ್ತಿಯ ಅಂತ್ಯಕ್ರಿಯೆ

ಭುಜ್‌: ಅಹಮದಾಬಾದ್‌ನ ವಿಮಾನ ದುರಂತದಲ್ಲಿ ಮೃತಪಟ್ಟ ಅನಿಲ್‌ ಖಿಮಾನಿ (35) ಅವರ ಅಂತ್ಯಕ್ರಿಯೆಯನ್ನು ಗುಜರಾತಿನ ಕಚ್‌ ಜಿಲ್ಲೆಯಲ್ಲಿ ನೆರವೇರಿಸಲಾಯಿತು. ಇದರೊಂದಿಗೆ ವಿಮಾನ ಅಪಘಾತದಲ್ಲಿ ಮೃತಪಟ್ಟ ಎಲ್ಲರ ಅಂತ್ಯಕ್ರಿಯೆ ನಡೆದಂತಾಗಿದೆ.

ವಿಮಾನ ಅಪಘಾತವಾದ ಎರಡು ವಾರಗಳ ಬಳಿಕ ಅನಿಲ್‌ ಅವರ ದೇಹವನ್ನು ಡಿಎನ್‌ಎ ಪರೀಕ್ಷೆಗಳ ಮೂಲಕ ಗುರುತಿಸಿ, ಅವರ ಕುಟುಂಬಕ್ಕೆ ಶುಕ್ರವಾರ ಸಂಜೆ ಹಸ್ತಾಂತರಿಸಲಾಗಿತ್ತು.

ಮೊದಲಿಗೆ ತಂದೆ, ಆ ಬಳಿಕ ತಾಯಿಯ ಡಿಎನ್‌ಎ ಮಾದರಿಗಳನ್ನು ಪರೀಕ್ಷೆಗೆ ಒಳಪಡಿಸಿದ ಬಳಿಕ ಅವರ ಪುತ್ರನ ದೇಹವನ್ನು ದೃಢಪಡಿಸಲಾಯಿತು.

ಜೂನ್‌ 12ರಂದು ಸರ್ದಾರ್‌ ವಲ್ಲಭಭಾಯಿ ಪಟೇಲ್‌ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದಿಂದ ಲಂಡನ್‌ಗೆ ತೆರಳಲು ಏರ್‌ ಇಂಡಿಯಾ ವಿಮಾನ ಟೇಕಾಫ್‌ ಆದ ಕೆಲವೇ ಕ್ಷಣಗಳಲ್ಲಿ ಮೇಘಾನಿನಗರದ ವೈದ್ಯಕೀಯ ಕಾಲೇಜಿನ ಸಂಕೀರ್ಣದಲ್ಲಿದ್ದ ಕಟ್ಟಡಕ್ಕೆ ಅಪ್ಪಳಿಸಿತ್ತು. ವಿಮಾನದಲ್ಲಿದ್ದ 241 ಪ್ರಯಾಣಿಕರು, ಸಿಬ್ಬಂದಿ ಹಾಗೂ ಘಟನಾ ಸ್ಥಳದಲ್ಲಿದ್ದ 19 ಮಂದಿ ಮೃತಪಟ್ಟಿದ್ದರು. ಪ್ರಯಾಣಿಕರೊಬ್ಬರು ಅಪಾಯದಿಂದ ಪಾರಾಗಿದ್ದರು.

ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

Below Post Ad

Qries