HEALTH TIPS

ಪದೇ ಪದೇ ತಾಂತ್ರಿಕ ತೊಂದರೆ; Air India ನಂಬಿಕೆ ಕಳೆದುಕೊಳ್ಳಲಿದೆ: ಹರಭಜನ್ ಸಿಂಗ್

ನವದೆಹಲಿ: ತಾಂತ್ರಿಕ ದೋಷದಿಂದ ಕಳೆದ ಕೆಲವು ದಿನಗಳಲ್ಲಿ ಹಲವು ಏರ್‌ ಇಂಡಿಯಾ ವಿಮಾನಗಳು ಪ್ರಯಾಣ ರದ್ದು ಅಥವಾ ತಡ ಮಾಡಿದ್ದು, ಪ್ರಯಾಣಿಕರಿಗೆ ತೊಂದರೆಗಿಂತ ಹೆಚ್ಚಾಗಿ ಏರ್‌ ಇಂಡಿಯಾ ಮೇಲಿನ ನಂಬಿಕೆ ಕಳೆದುಕೊಳ್ಳುವಂತೆ ಮಾಡಿದೆ ಎಂದು ಮಾಜಿ ಕ್ರಿಕೆಟಿಗ ಹರಭಜನ್ ಸಿಂಗ್ ಅವರು ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.

ಏರ್‌ ಇಂಡಿಯಾವು ಈ ಸಮಸ್ಯೆಯನ್ನು ಗಂಭೀರವಾಗಿ ಪರಿಗಣಿಸುವ ಮೂಲಕ ಅತಿ ಶೀಘ್ರದಲ್ಲಿ ಬಗೆಹರಿಸಬೇಕು. ಅದರ ನಿರ್ವಹಣಾ ಪ್ರೋಟೋಕಾಲ್‌ಗಳನ್ನು ತುರ್ತಾಗಿ ಹೆಚ್ಚಿಸಬೇಕು, ಹೆಚ್ಚಿನ ಸುರಕ್ಷತಾ ತಪಾಸಣೆ ಹಾಗೂ ತಾಂತ್ರಿಕ ವಿಭಾಗದ ಕುರಿತು ಗಮನನೀಡಬೇಕು ಎಂದು ಎಕ್ಸ್‌ನಲ್ಲಿ ಪೋಸ್ಟ್‌ ಮಾಡಿದ್ದಾರೆ.

ಪ್ರಯಾಣಿಕರ ಸುರಕ್ಷತೆಯ ಜೊತೆ ಏರ್‌ ಇಂಡಿಯಾವು ರಾಜಿ ಮಾಡಿಕೊಳ್ಳಬಾರದು. ಪ್ರಯಾಣಿಕರ ಜೊತೆ ಪಾರದರ್ಶಕ ಸಂವಹನ ಮಾಡುವ ಮೂಲಕ ಅವರ ನಂಬಿಕೆಯನ್ನು ಮರಳಿ ಪಡೆಯುವ ಕೆಲಸ ಮಾಡಬೇಕಿದೆ ಎಂದಿದ್ದಾರೆ.

ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

Below Post Ad

Qries