ಕಾಸರಗೋಡು: ಜಿಲ್ಲೆಯಲ್ಲಿ ನಿರಂತರ ಮಳೆಯಾಗುತ್ತಿದ್ದು, ರಾಜ್ಯಾದ್ಯಂತ ಜೂ. 15ರ ವರೆಗೂ ಬಿರುಸಿನ ಮಳೆಯಾಗುವ ಸಾಧ್ಯತೆ ಬಗ್ಗೆ ಕೇಂದ್ರ ಹವಾಮಾನ ಇಲಾಖೆ ಮುನ್ಸೂಚನೆ ನಿಡಿದೆ. ಬಂಗಾಳಕೊಲ್ಲಿಯಲ್ಲಿ ಮತ್ತೆ ವಾಯುಭಾರ ಕುಸಿತದ ಹಿನ್ನೆಲೆಯಲ್ಲಿ ಕೇರಳಾದ್ಯಂತ ಬಿರುಸಿನ ಮಳೆಗೆ ಕಾರಣವೆನ್ನಲಾಗಿದೆ. ಕಾಸರಗೋಡು, ಕಣ್ಣೂರು ಜಿಲ್ಲೆಗಳಲ್ಲಿ ಜೂ. 14ರ ವರೆಗೂ ಆರೆಂಜ್ ಹಾಗೂ ಇತರ ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.





