ಕಾಸರಗೋಡು: ಎಡನೀರು ಮಠಾಧೀಶ ಶ್ರೀ ಸಚ್ಚಿದಾನಂದ ಭಾರತಿ ಸ್ವಾಮೀಜಿಯವರ ಪಂಚಮ ಚಾತುರ್ಮಾಸ್ಯ ವ್ರತಾಚರಣೆಯು ಜುಲೈ ತಿಂಗಳ 10ರಿಂದ ಸೆಪ್ಟೆಂಬರ್ 7ರವರೆಗೆ ವಿವಿಧ ಧಾರ್ಮಿಕ, ವೈದಿಕ, ಸಾಂಸ್ಕøತಿಕ ಕಾರ್ಯಕ್ರಮಗಳೊಂದಿಗೆ ಎಡನೀರು ಶ್ರೀಮಠದಲ್ಲಿ ಜರಗಲಿದೆ.
ಕಾರ್ಯಕ್ರಮದ ಯಶಸ್ವಿಗಾಗಿ ಊರ ಪರಪೂರ ಭಕ್ತಾದಿಗಳ ವಿವಿಧ ಸಮಿತಿಗಳ ಮಹಾಸಭೆ ಜೂನ್ ತಿಂಗಳ 22ನೇ ತಾರೀಕು ಆದಿತ್ಯವಾರ ಸಂಜೆ 4:30ಕ್ಕೆ ಎಡನೀರು ಶ್ರೀಮಠದಲ್ಲಿ ಜರಗಲಿರುವುದಾಗಿ ಪ್ರಕಟಣೆ ತಿಳಿಸಿದೆ.





