HEALTH TIPS

ಮುಳ್ಳೇರಿಯದಲ್ಲಿ ವಿಶ್ವ ಪರಿಸರ ದಿನಾಚರಣೆ

ಮುಳ್ಳೇರಿಯ: ಇಲ್ಲಿಯ ಕಯ್ಯಾರ ಕಿಞ್ಞಣ್ಣ ರೈ ಸ್ಮಾರಕ ಗ್ರಂಥಾಲಯದಲ್ಲಿ ಕಾರ್ಯನಿರ್ವಹಿಸುತ್ತಿರುವ ನವೋದಯ ಪುರುಷ ಸ್ವ-ಸಹಾಯ ಸಂಘದ ಆಶ್ರಯದಲ್ಲಿ ಗುರುವಾರ ಪರಿಸರ ದಿನದಂದು ಗುಂಪಿನ ಸದಸ್ಯರಿಗೆ ಉತ್ತಮ ಗುಣಮಟ್ಟದ ಮಾವಿನ ಸಸಿಗಳನ್ನು ವಿತರಿಸಲಾಯಿತು. ವಿತರಣೆಯನ್ನು ಕಾರಡ್ಕ ಗ್ರಾ.ಪಂ. ಅಧ್ಯಕ್ಷ ಗೋಪಾಲಕೃಷ್ಣ ಭಟ್ ನೆರವೇರಿಸಿದರು. ಕೆ.ಕೆ. ರಂಜಿತ್ ಪರಿಸರ ದಿನಾಚರಣೆಯ ಪ್ರತಿಜ್ಞೆಯನ್ನು ಬೋಧಿಸಿದರು. ಸುಭಾಷ್ ಕೆ.ಎಂ. ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ಕೆ.ಕೆ. ಮೋಹನನ್, ಕೆ.ಗೋವಿಂದನ್ ಮತ್ತು ರಾಜೇಶ್ ಕುಮಾರ್ ಕೆ. ಮಾತನಾಡಿದರು.




ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

Below Post Ad

Qries