HEALTH TIPS

ಛತ್ತೀಸಗಢದಲ್ಲಿ ಐವರು ನಕ್ಸಲ್‌ರ ಹತ್ಯೆ: ಮಾವೋ ನಾಯಕರಾದ ಚಲಂ, ಭಾಸ್ಕರ್‌ ಸಾವು

ಬಿಜಾಪುರ: ಛತ್ತೀಸಗಢದ ಬಿಜಾಪುರ ಜಿಲ್ಲೆಯಲ್ಲಿ ಭದ್ರತಾ ಪಡೆಗಳು ನಡೆಸಿದ ಎರಡು ಎನ್‌ಕೌಂಟರ್‌ಗಳಲ್ಲಿ ಐವರು ನಕ್ಸಲರು ಮೃತಪಟ್ಟಿದ್ದಾರೆ.

ನಕ್ಸಲ್‌ ಸಂಘಟನೆಯ ಉನ್ನತ ನಾಯಕರಾದ ತೆಲಂಗಾಣ ರಾಜ್ಯ ಸಮಿತಿಯ ವಿಶೇಷ ವಲಯ ಸಮಿತಿ ಸದಸ್ಯ ಭಾಸ್ಕರ್‌ ಹಾಗೂ ಮಾವೋವಾದಿಗಳ ಕೇಂದ್ರ ಸಮಿತಿ ಸದಸ್ಯ ನರಸಿಂಹ ಚಲಂ ಅಲಿಯಾಸ್‌ ಸುಧಾಕರ್‌ ಹತ್ಯೆಯಾಗಿದ್ದಾರೆ ಎಂದು ಪೊಲೀಸರು ಶನಿವಾರ ತಿಳಿಸಿದ್ದಾರೆ.

ಭಾಸ್ಕರ್‌ ಸುಳಿವು ನೀಡಿದವರಿಗೆ ₹45 ಲಕ್ಷ ಬಹುಮಾನವನ್ನು ಛತ್ತೀಸಗಢ ಹಾಗೂ ತೆಲಂಗಾಣದಲ್ಲಿ ಘೋಷಿಸಲಾಗಿತ್ತು. ಚಲಂ ಸುಳಿವು ನೀಡಿದವರಿಗೆ ಛತ್ತೀಸಗಢ ಸರ್ಕಾರ ₹40 ಲಕ್ಷ ಬಹುಮಾನವನ್ನು ಘೋಷಿಸಿತ್ತು.

ಜಿಲ್ಲೆಯ ಇಂದ್ರಾವತಿ ರಾಷ್ಟ್ರೀಯ ಉದ್ಯಾನ ಪ್ರದೇಶದಲ್ಲಿ ಜೂನ್‌ 4ರಿಂದ ಕಾರ್ಯಾಚರಣೆ ನಡೆದಿದೆ. ಎರಡು ಎಕೆ-47 ರೈಫಲ್‌ಗಳು ಸೇರಿದಂತೆ ಅಪಾರ ಮದ್ದುಗುಂಡು, ಶಸ್ತ್ರಾಸ್ತ್ರಗಳನ್ನು ವಶಪಡಿಸಿಕೊಳ್ಳಲಾಗಿದೆ.

ಮೃತಪಟ್ಟ ನಕ್ಸಲರಲ್ಲಿ ಇಬ್ಬರು ಮಹಿಳೆಯರ ಶವ ದೊರೆತಿದ್ದು, ಅವರ ಗುರುತು ಪತ್ತೆಯಾಗಿಲ್ಲ. ಭದ್ರತಾ ಸಿಬ್ಬಂದಿಗಳು ಸಹ ಗಾಯಗೊಂಡಿದ್ದಾರೆ ಎಂದು ಹಿರಿಯ ಪೊಲೀಸ್‌ ಅಧಿಕಾರಿಯೊಬ್ಬರು ಮಾಹಿತಿ ನೀಡಿದ್ದಾರೆ.

ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

Below Post Ad

Qries