HEALTH TIPS

ರಾಜ್ಯಪಾಲರ ವಿರುದ್ಧ ಪ್ರತಿಭಟನೆ ವೇಳೆ ಕೆಎಸ್‍ಯು ಕಾರ್ಯಕರ್ತರ ಮೇಲೆ ಹಲ್ಲೆ; ತಿರುವನಂತಪುರಂ ಜಿಲ್ಲೆಯಲ್ಲಿ ಶೈಕ್ಷಣಿಕ ಬಂದ್

ತಿರುವನಂತಪುರಂ: ರಾಜ್ಯಪಾಲರ ವಿರುದ್ಧ ಪ್ರತಿಭಟನೆ ವೇಳೆ ಕೆಎಸ್‍ಯು ಜಿಲ್ಲಾಧ್ಯಕ್ಷರು ಸೇರಿದಂತೆ ಜನರ ಮೇಲೆ ಹಲ್ಲೆ ನಡೆಸಿದ್ದಕ್ಕೆ ಪ್ರತಿಭಟಿಸಿ ತಿರುವನಂತಪುರಂ ಜಿಲ್ಲೆಯಲ್ಲಿ ಗುರುವಾರ ಶೈಕ್ಷಣಿಕ ಬಂದ್ ಘೋಷಿಸಲಾಗಿತ್ತು.

ಕೇರಳ ವಿಶ್ವವಿದ್ಯಾಲಯದ ಸೆನೆಟ್ ಹಾಲ್‍ನಲ್ಲಿ ನಿನ್ನೆ ನಡೆದ ಕಾರ್ಯಕ್ರಮದಲ್ಲಿ ಕೆಎಸ್‍ಯು ರಾಜ್ಯಪಾಲರ ವಿರುದ್ಧ ಪ್ರತಿಭಟನೆ ನಡೆಸಿತ್ತು. ಘರ್ಷಣೆಯಲ್ಲಿ ಕೆಎಸ್‍ಯು ಜಿಲ್ಲಾಧ್ಯಕ್ಷ ಗೋಪು ನೆಯ್ಯರ್ ಮತ್ತು ಇತರರನ್ನು ಥಳಿಸಲಾಗಿತ್ತು. 

ಆರ್‍ಎಸ್‍ಎಸ್-ಯುವ ಮೋರ್ಚಾ ಕಾರ್ಯಕರ್ತರು ತಮ್ಮ ಮೇಲೆ ಹಲ್ಲೆ ನಡೆಸಿದ್ದಾರೆ ಮತ್ತು ಪ್ರತಿಭಟನೆಯ ಭಾಗವಾಗಿ ಅವರು ಶಿಕ್ಷಣ ಬಂದ್‍ಘೋಷಿಸಿರುವುದಾಗಿ ಕೆಎಸ್‍ಯು ನಾಯಕರು ತಿಳಿಸಿದ್ದಾರೆ.


ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

Below Post Ad

Qries