HEALTH TIPS

ಕದನ ವಿರಾಮ: ಮತದಾನದಿಂದ ಹೊರಗುಳಿದ ಕೇಂದ್ರದ ವಿರುದ್ಧ ಕಾಂಗ್ರೆಸ್ ಕಿಡಿ

ನವದೆಹಲಿ‌: ಗಾಜಾದಲ್ಲಿ ಕದನ ವಿರಾಮ ಘೋಷಣೆಗೆ ಸಂಬಂಧಿಸಿದ ವಿಶ್ವಸಂಸ್ಥೆಯ ಸಾಮಾನ್ಯ ಸಭೆಯ ನಿರ್ಣಯದ ಕುರಿತ ಮತದಾನದಿಂದ ದೂರ ಉಳಿದ ಕೇಂದ್ರ ಸರ್ಕಾರದ ವಿರುದ್ಧ ಕಾಂಗ್ರೆಸ್‌ ಶನಿವಾರ ವಾಗ್ದಾಳಿ ನಡೆಸಿದೆ. ಭಾರತದ ವಿದೇಶಾಂಗ ನೀತಿಯು ಅಧಃಪತನ ಹೊಂದುತ್ತಿದೆ ಎಂದು ಅದು ಆರೋಪಿಸಿದೆ.

ಯುದ್ಧ, ಜನಾಂಗೀಯ ಹತ್ಯೆ ವಿರುದ್ಧದ ಮತ್ತು ನ್ಯಾಯದ ಪರವಾದ ತನ್ನ ತಾತ್ವಿಕ ನಿಲುವುಗಳನ್ನ ಭಾರತವು ಕೈಬಿಟ್ಟಿದೆಯೇ? ಈ ಬಗ್ಗೆ ಸರ್ಕಾರ ಉತ್ತರ ನೀಡಬೇಕು ಎಂದು ಪಕ್ಷವು ಆಗ್ರಹಿಸಿದೆ.

'ಭಾರತದ ವಿದೇಶಾಂಗ ನೀತಿಯು ದಿನದಿಂದ ದಿನಕ್ಕೆ ಅಧಃಪತನದ ಹಾದಿಯಲ್ಲಿದೆ. ಆದ್ದರಿಂದ, ಪ್ರಧಾನಿ ನರೇಂದ್ರ ಮೋದಿ ಅವರು ವಿದೇಶಾಂಗ ಸಚಿವರನ್ನು ಕರೆದು, ಅವರನ್ನು ಹೊಣೆಗಾರರನ್ನಾಗಿಸಬೇಕು' ಎಂದು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಒತ್ತಾಯಿಸಿದ್ದಾರೆ.

'ಗಾಜಾದಲ್ಲಿ ಕದನವಿರಾಮ ಘೋಷಿಸುವ ವಿಶ್ವಸಂಸ್ಥೆಯ ನಿರ್ಣಯದ ಪರವಾಗಿ 149 ರಾಷ್ಟ್ರಗಳು ಮತ್ತು ನಿರ್ಣಯದ ವಿರುದ್ಧ 12 ದೇಶಗಳು ಸಹಿ ಮಾಡಿವೆ. ಮತದಾನದಿಂದ ಹೊರಗುಳಿದ 19 ರಾಷ್ಟ್ರಗಳ ಪೈಕಿ ಭಾರತವೂ ಒಂದು' ಎಂದು ಅವರು 'ಎಕ್ಸ್‌'ನಲ್ಲಿ ಪೋಸ್ಟ್‌ ಮಾಡಿದ್ದಾರೆ.

ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

Below Post Ad

Qries