HEALTH TIPS

ಪಶ್ಚಿಮ ಬಂಗಾಳ: ಬಿಎಸ್‌ಎಫ್‌ ಕಾನ್‌ಸ್ಟೆಬಲ್‌ನಿಂದ ಅಧಿಕಾರಿ ಕೊಲೆ

ನವದೆಹಲಿ: ಪಶ್ಚಿಮ ಬಂಗಾಳದ ಮುರ್ಷಿದಾಬಾದ್‌ ಜಿಲ್ಲೆಯಲ್ಲಿ ಬಿಎಸ್‌ಎಫ್‌ ಅಧಿಕಾರಿಗಳ ನಡುವೆ ತೀವ್ರ ವಾಗ್ವಾದ ನಡೆದ ಪರಿಣಾಮ, ಕಾನ್‌ಸ್ಟೆಬಲ್‌ ಒಬ್ಬರು ಹಿರಿಯ ಅಧಿಕಾರಿಯನ್ನು ಗುಂಡಿಕ್ಕಿ ಹತ್ಯೆ ಮಾಡಿದ್ದಾರೆ ಎಂದು ಅಧಿಕಾರಿಗಳು ಭಾನುವಾರ ತಿಳಿಸಿದ್ದಾರೆ.

ಈ ಘಟನೆ ಶನಿವಾರ ರಾತ್ರಿ 10:30ರ ಸುಮಾರಿಗೆ ಧೂಲಿಯನ್‌ನಲ್ಲಿರುವ ಬಿಎಸ್‌ಎಫ್ ಶಿಬಿರದಲ್ಲಿ ನಡೆದಿದೆ. ಕಾನ್‌ಸ್ಟೆಬಲ್‌ ಶಿವಂ ಕುಮಾರ್‌ ಮಿಶ್ರಾ ಅವರು ಹೆಡ್‌ ಕಾನ್‌ಸ್ಟೆಬಲ್‌ ರತನ್‌ ಸಿಂಗ್‌ ಶೆಖಾವತ್‌ (56) ಅವರನ್ನು ತಮ್ಮ ಸರ್ವಿಸ್‌ ರೈಫಲ್‌ನಿಂದ ಗುಂಡು ಹಾರಿಸಿ, ಹತ್ಯೆ ಮಾಡಿದ್ದಾರೆ. ಆರೋಪಿಯನ್ನು ಬಂಧಿಸಲಾಗಿದ್ದು, ಘಟನೆಗೆ ಕಾರಣವೇನೆಂದು ಕಂಡುಹಿಡಿಯಲಾಗುತ್ತಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಶೆಖಾವತ್ 1989ರಲ್ಲಿ ಬಿಎಸ್‌ಎಫ್‌ಗೆ ಸೇರಿ 119ನೇ ಬೆಟಾಲಿಯನ್‌ನಲ್ಲಿ ಸೇವೆ ಸಲ್ಲಿಸಿದರು. ಅವರು ರಾಜಸ್ಥಾನದ ಜೈಪುರದವರಾಗಿದ್ದು, ಆರೋಪಿಯೂ ಅದೇ ಬೆಟಾಲಿಯನ್‌ಗೆ ಸೇರಿದವರು ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

Below Post Ad

Qries