ಕಾಸರಗೋಡು: ಕರ್ನಾಟಕ ಚುಟುಕು ಸಾಹಿತ್ಯ ಪರಿಷತ್(ಕಚುಸಾಪ)ನ 5ನೇ ಅಂತಾರಾಜ್ಯ ಸಮ್ಮೇಳನ'ಚುಟುಕು ಸಾಹಿತ್ಯ ಸಿರಿ' ಕಾರ್ಯಕ್ರಮ ಕಾಸರಗೋಡಿನ ಸಿರಿಬಾಗಿಲು ವೆಂಕಪ್ಪಯ್ಯ ಸಾಂಸ್ಕೃತಿಕ ಭವನದಲ್ಲಿ ಜೂ. 29ರಂದು ಬೆಳಗ್ಗೆ 10ಕ್ಕೆ ಜರುಗಲಿದೆ.
ಸಿರಿಬಾಗಿಲು ವೆಂಕಪ್ಪಯ್ಯ ಸಾಂಸ್ಕøತಿಕ ಪ್ರತಿಷ್ಟಾನ(ರಿ) ಹಾಗೂ ಕರ್ನಾಟಕ ಚುಟುಕು ಸಾಹಿತ್ಯ ಪರಿಷತ್ತಿನ ಕೇಂದ್ರ ಸಮಿತಿ ವತಿಯಿಂದ ಕಾರ್ಯಕ್ರಮ ಆಯೋಜಿಸಲಾಗಿದೆ. ನಾಡಿನ ಹಿರಿಯ ಚಿಂತಕ, ಶಿಕ್ಷಣ ತಜ್ಞ ವಿ.ಬಿ.ಕುಳಮರ್ವ ಸಮ್ಮೇಳನ ಸರ್ವಾಧ್ಯಕ್ಷರಾಗಿದ್ದು, ಹಿರಿಯ ಪತ್ರಕರ್ತ ರಾಧಾಕೃಷ್ಣ ಕೆ.ಉಳಿಯತ್ತಡ್ಕ ಸಮ್ಮೇಳನಕ್ಕೆ ಚಾಲನೆ ನೀಡುವರು. ಉಡುಪಿಯ ಜ್ಯೋತಿಷ್ಯ ಪಂಡಿತ ವಿದ್ವಾನ್ ರಘುಪತಿ ಭಟ್ ಮುಖ್ಯ ಅತಿಥಿಯಾಗಿ ಭಾಗವಹಿಸುವರು. ಪ್ರತಿಷ್ಠಾನ ಅಧ್ಯಕ್ಷ ರಾಮಕೃಷ್ಣ ಮಯ್ಯ ಚುಟುಕು ಪುಸ್ತಕ ಲೋಕಾರ್ಪಣೆಗೈಯುವರು. ಕಚುಸಾಪ ಸಂಚಾಲಕ ಕೃಷ್ಣಮೂರ್ತಿ ಕುಲಕರ್ಣಿ, ಜಿಲ್ಲಾಧ್ಯಕ್ಷ ಪೆÇ್ರ.ಜಿ.ಯು.ನಾಯಕ ಉಪಸ್ಥಿತರಿರುವರು.
11-30ಕ್ಕೆ ಶಿರಸಿಯ ಯಕ್ಷಗಾನ ತಜ್ಞ ಗಣಪತಿ ಭಟ್ಟ ವರ್ಗಾಸರ ಅಧ್ಯಕ್ಷತೆಯಲ್ಲಿ ವಿಚಾರಗೋಷ್ಟಿ ನಡೆಯುವುದು. ಡಾ.ವಸಂತ ನಾಯಕ ಆಶಯ ಭಾಷಣ ಮಾಡುವರು. ಮೈಸೂರಿನ ಎನ್.ವಿ.ರಮೇಶ್, ಲತಾ ಮೋಹನ ಹಾಗೂ ಗದುಗಿನ ವೀರನಗೌಡ ಮರಿಗೌಡ ಉಪನ್ಯಾಸ ನೀಡುವರು. ಮಧ್ಯಾಹ್ನ ಸಮಾರೋಪ ಹಾಗೂ ಕವಿಗೋಷ್ಟಿಯಲ್ಲಿ ಡಾ. ಸುರೇಶ ನೆಗಲಗುಳಿ ಅಧ್ಯಕ್ಷತೆ ವಹಿಸುವರು. ಡಾ.ಕೆ.ಗೋವಿಂದ ಭಟ್ಟ ಆಶಯನುಡಿ, ಹಾವೇರಿಯ ಶೇಖರಗೌಡ ಪಾಟೀಲ ನಿರ್ಣಯ ಮಂಡಿಸುವರು. ಈ ಸಂದರ್ಭ ನಾಡಿನ ಇಪ್ಪತ್ತು ಜನ ಕವಿಗಳು ಕವನ ವಾಚನ ಮಾಡುವರು. ಕಾಸರಗೋಡು ಗಡಿನಾಡ ಸಾಂಸ್ಕೃತಿಕ ಸಂಘಟನೆಯ ಡಾ.ವಾಣಿಶ್ರೀ ಹಾಗೂ ತಂಡದಿಂದ ನೃತ್ಯ ಸಂಗೀತ ವೈಭವ, ನಂತರ ವಾದಿರಾಜ ಕಲ್ಲೂರಾಯ ರ ನೇತೃತ್ವದಲ್ಲಿ ಹರಿಸರ್ವೋತ್ತಮ ಯಕ್ಷ ತಾಳಮದ್ದಳೆ ಕಾರ್ಯಕ್ರಮ ನಡೆಯಲಿರುವುದು.




