ನವದೆಹಲಿ: ಜೂನ್ 1 ರಿಂದ 30ರವರೆಗೆ 'ಆಪರೇಷನ್ ಸಿಂಧೂರ' ವಿಷಯದ ಮೇಲೆ ಪ್ರಬಂಧ ಸ್ಪರ್ಧೆಯನ್ನು ರಕ್ಷಣಾ ಸಚಿವಾಲಯ ಭಾನುವಾರ ಪ್ರಕಟಿಸಿದೆ.
X ನಲ್ಲಿನ ಪೋಸ್ಟ್ನಲ್ಲಿ ಸಚಿವಾಲಯವು, ಅಗ್ರ ಮೂರು ವಿಜೇತರಿಗೆ ತಲಾ 10,000 ರೂ. ನಗದು ಬಹುಮಾನ ನೀಡಲಾಗುವುದು ಮತ್ತು ದೆಹಲಿಯ ಕೆಂಪು ಕೋಟೆಯಲ್ಲಿ ನಡೆಯುವ 78ನೇ ಸ್ವಾತಂತ್ರ್ಯ ದಿನಾಚರಣೆಯಲ್ಲಿ ಭಾಗವಹಿಸಲು ವಿಶೇಷ ಅವಕಾಶ ಪಡೆಯುತ್ತಾರೆ ಎಂದು ತಿಳಿಸಿದೆ.
ಏಪ್ರಿಲ್ 22ರಂದು ಜಮ್ಮು ಮತ್ತು ಕಾಶ್ಮೀರದ ಪಹಲ್ಗಾಮ್ನಲ್ಲಿ ನಡೆದ ಭಯೋತ್ಪಾದಕ ದಾಳಿಯಲ್ಲಿ 26 ಜನರು ಸಾವಿಗೀಡಾಗಿದ್ದಕ್ಕೆ ಪ್ರತೀಕಾರವಾಗಿ ಪಾಕಿಸ್ತಾನ ಮತ್ತು ಪಾಕ್ ಆಕ್ರಮಿತ ಕಾಶ್ಮೀರದಲ್ಲಿನ ಒಂಬತ್ತು ಭಯೋತ್ಪಾದಕ ನೆಲಗಳನ್ನು ಗುರಿಯಾಗಿಸಿ ಮೇ 7ರಂದು ಆಪರೇಷನ್ ಸಿಂಧೂರವನ್ನು ಪ್ರಾರಂಭಿಸಲಾಯಿತು.
ಭಯೋತ್ಪಾದನೆಯ ವಿರುದ್ಧ ಭಾರತ 'ಹೊಸ ಕೆಂಪು ರೇಖೆ'ಯನ್ನು ಎಳೆದಿದೆ ಎಂದು ನರೇಂದ್ರ ಮೋದಿ ನೇತೃತ್ವದ ಸರ್ಕಾರ ಹೇಳಿದೆ. ಭಯೋತ್ಪಾದನೆಗೆ, ವಿಶೇಷವಾಗಿ ಗಡಿಯಾಚೆಗಿನ ಭಯೋತ್ಪಾದನೆಗೆ ಭಾರತ ಹೇಗೆ ಪ್ರತಿಕ್ರಿಯಿಸುತ್ತದೆ ಎಂಬುದರಲ್ಲಿ ಆಪರೇಷನ್ ಸಿಂಧೂರ ಇದೀಗ ಉದಾಹರಣೆಯಾಗಿದೆ ಎಂದು ಪ್ರತಿಪಾದಿಸಿದೆ.




.jpg)

