HEALTH TIPS

ಮಣಿಪುರ | ಬಿಷ್ಣುಪುರದಲ್ಲಿ ರೈತನ ಮೇಲೆ ಗುಂಡಿನ ದಾಳಿ: ಗಾಯ

ಇಂಫಾಲ್‌: ಬಿಷ್ಣುಪುರ ಜಿಲ್ಲೆಯ ಫುಬಲಾ ಗ್ರಾಮದ ಗದ್ದೆಯಲ್ಲಿ ಕೆಲಸ ಮಾಡುತ್ತಿದ್ದ ಗುಂಪಿನ ಮೇಲೆ ಹತ್ತಿರದ ಗುಡ್ಡಗಾಡು ಪ್ರದೇಶಗಳಿಂದ ಗುಂಡಿನ ದಾಳಿ ನಡೆಸಿದ್ದರಿಂದ ರೈತರೊಬ್ಬರು ತೀವ್ರವಾಗಿ ಗಾಯಗೊಂಡಿದ್ದಾರೆ.

ನಿಂಗ್‌ತೌಜಮ್‌ ಬಿರೇನ್‌ ಅವರು ಗುಂಡಿನ ದಾಳಿಯಿಂದ ಆಸ್ಪತ್ರೆಗೆ ದಾಖಲಾಗಿದ್ದಾರೆ.

'ನಾನು ಗದ್ದೆಯಲ್ಲಿ ಕೆಲಸ ಮಾಡುತ್ತಿದ್ದ ವೇಳೆ ಐದು ಸುತ್ತು ಗುಂಡಿನ ದಾಳಿ ನಡೆಸಿದರು. ಸುತ್ತಲಿನ ಗುಡ್ಡಗಾಡು ಪ್ರದೇಶದಿಂದಲೇ ಈ ದಾಳಿ ನಡೆದಿದೆ' ಎಂದು ಅವರು ತಿಳಿಸಿದರು.

ಇಂಫಾಲ್‌ ಕಣಿವೆಯ ಹೊರವಲಯದಲ್ಲಿರುವ ಫುಬಲಾ ವಿಸ್ತಾರವಾದ ಕೃಷಿ ಭೂಮಿಯನ್ನು ಹೊಂದಿದ್ದು, ಒಂದು ಭಾಗದಲ್ಲಿ ಚುರಾಚಾಂದ್‌ಪುರದ ಬೆಟ್ಟ ಗುಡ್ಡಗಳನ್ನು ಒಳಗೊಂಡಿದೆ. ಘಟನೆ ನಡೆದ ಬಳಿಕ ಭದ್ರತಾ ಪಡೆಗಳನ್ನು ಸ್ಥಳಕ್ಕೆ ಕಳುಹಿಸಲಾಗಿದೆ.

'ಸ್ಥಳೀಯರು ಫುಬಲಾವನ್ನು ಸಂಪೂರ್ಣ ಬಂದ್‌ ಮಾಡಿ, ಪ್ರತಿಭಟನೆ ನಡೆಸಿದರು. ಜಿಲ್ಲೆಯ ಕೆಲವು ಪ್ರದೇಶಗಳಲ್ಲಿ ಸಂಚಾರ ಮಾಡುವುದನ್ನು ನಿರ್ಬಂಧಿಸಿ, ಭದ್ರತಾ ಪಡೆಗಳು ಕ್ರಮ ಕೈಗೊಂಡಿವೆ' ಎಂದು ಅಧಿಕಾರಿಯೊಬ್ಬರು ತಿಳಿಸಿದರು.

ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

Below Post Ad

Qries