HEALTH TIPS

ಕಸಾಪ ಅಭಿನಂದನೆ ಸ್ವೀಕರಿಸಿದ ಶಶಿಕಲಾ ಬಾಯಾರು: ಹಿರಿಯ ಸಾಧಕರನ್ನು ಅವರ ಮನೆಯಂಗಳದಲ್ಲಿ ಗೌರವಿಸುವ ಕಾರ್ಯಕ್ರಮ

ಉಪ್ಪಳ: ಕಸೂತಿ-ಕರಕುಶಲ ತಜ್ಞೆ,ಸಾಹಿತಿ,ಅಂಕಣಗಾರ್ತಿ ಶಶಿಕಲಾ ಬಾಯಾರು  ಅವರನ್ನು ಕನ್ನಡ ಸಾಹಿತ್ಯ ಪರಿಷತ್ತು ಕೇರಳ ಗಡಿನಾಡ ಘಟಕ ವತಿಯಿಂದ ಸಜಂಕಿಲ ದಲ್ಲಿರುವ  ಅವರ ನಿವಾಸ 'ಸ್ವಸ್ತಿಕ'ದಲ್ಲಿ ಅಭಿನಂದಿಸಲಾಯಿತು. ಕನ್ನಡ ಭಾಷೆ, ಸಾಹಿತ್ಯ,ಕಲೆ, ಸಂಸ್ಕøತಿಗಳಿಗೆ ಅಮೂಲ್ಯ ಕೊಡುಗೆ ನೀಡಿದ ಹಿರಿಯ ಸಾಧಕರನ್ನು ಅವರ ಮನೆಯಂಗಳದಲ್ಲಿ ಗೌರವಿಸುವ ಕನ್ನಡ ಸಾಹಿತ್ಯ ಪರಿಷತ್ತು ಕೇರಳ ಗಡಿನಾಡ ಘಟಕz 'ಪರಿಷತ್ತಿನ ನಡಿಗೆ ಹಿರಿಯ ಸಾಧಕರ ಕಡೆಗೆ'ಎಂಬ ಕಾರ್ಯಕ್ರಮದ ಅಂಗವಾಗಿ ಕಾರ್ಯಕ್ರಮ ಆಯೋಜಿಸಲಾಗಿತ್ತು. 

ಕನ್ನಡ ಸಾಹಿತ್ಯ ಪರಿಷತ್ತು ಕೇರಳ ಗಡಿನಾಡ ಘಟಕದ ಅಧ್ಯಕ್ಷ ಡಾ. ಜಯಪ್ರಕಾಶ ನಾರಾಯಣ ತೊಟ್ಟೆತ್ತೋಡಿ ಅಧ್ಯಕ್ಷತೆ ವಹಿಸಿ,   ಶಶಿಕಲಾ ಬಾಯಾರು ಅವರನ್ನು  ಶಾಲು ಹೊದೆಸಿ ಅಭಿನಂದಿಸಿದರು. ಕಾಸರಗೋಡು ಜಿಲ್ಲಾ ಕನ್ನಡ ಲೇಖಕರ ಸಂಘದ ಕಾರ್ಯಾಧ್ಯಕ್ಷ ಪೆÇ್ರ. ಪಿ. ಎನ್ ಮೂಡಿತ್ತಾಯ ಅಭಿನಂದನಾ ಭಾಷಣ ಮಾಡಿ, ವಿದ್ವಾನ್ ಪೆರ್ಲ ಕೃಷ್ಣ ಭಟ್ಟರ ಪುತ್ರಿಯಾಗಿರುವ ಶಶಿಕಲಾ ಬಾಯಾರು ಅವರು ಕಾಸರಗೋಡಿನ ಹೆಮ್ಮೆಯ ಕಸೂತಿ ಚಿತ್ರಕಲಾವಿದೆ. ಅವರ ವ್ಯಕ್ತಿಚಿತ್ರಗಳು ಅಪೂರ್ವವಾದವುಗಳು. ಅವರ 'ಪತ್ರಾರ್ಜಿತ'ಕೃತಿ, ಅಂಕಣ ಪತ್ರಗಳು,ಕತೆಗಳು ವೈಶಿಷ್ಠ್ಯಪೂರ್ಣವಾದವುಗಳು.ಎಲೆಮರೆಯ ಕಾಯಂತಿರುವ ಶಶಿಕಲಾರ  ಕಸೂತಿಚಿತ್ರಗಳು ನಾಡಿನಾದ್ಯಂತ ಪ್ರದರ್ಶನಗೊಳ್ಳಬೇಕಾಗಿದೆ ಎಂದು ತಿಳಿಸಿದರು. 

ಕವಯತ್ರಿ ಸಂಧ್ಯಾ ಗೀತಾ ಬಾಯಾರು, ನಿವೃತ್ತ  ಮುಖ್ಯ ಶಿಕ್ಷಕ ರಾಜಾರಾಮ, ಶಿಕ್ಷಕ ಪ್ರಭಾಕರ, ಶಿಕ್ಷಕಿ ನಿವೇದಿತಾ, ಕೊಳಲು ತಜ್ಞ ಕೃಷ್ಣರಾಜ, ಚಿನ್ಮಯ ಕೃಷ್ಣ ,ಆಶಯ, ಸ್ಮಿತಾ  ಉಪಸ್ಥಿತರಿದ್ದರು.

ಕನ್ನಡ ಸಾಹಿತ್ಯ ಪರಿಷತ್ತಿನ ಗೌರವ ಕಾರ್ಯದರ್ಶಿ ಶೇಖರ ಶೆಟ್ಟಿ ಬಾಯಾರು ಸ್ವಾಗತಿಸಿದರು. ಸಂಘಟನಾ ಕಾರ್ಯದರ್ಶಿ ವಿಶಾಲಾಕ್ಷ ಪುತ್ರಕಳ ಕಾರ್ಯಕ್ರಮ ನಿರೂಪಿಸಿದರು.  ಶಿಕ್ಷಕ ರವಿಲೋಚನ ಸಿ.ಎಚ್ ವಂದಿಸಿದರು.



ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

https://drive.google.com/file/d/1xvTBLBh0henjhvlJCaNItofEXO_RJIZu/view?usp=sharing

Below Post Ad

https://drive.google.com/file/d/1xvTBLBh0henjhvlJCaNItofEXO_RJIZu/view?usp=sharing

HOTEL

HOTEL
CENTURY
Qries