HEALTH TIPS

ಭಾರತೀಯರ ಸುರಕ್ಷಿತ ಸ್ಥಳಾಂತರಕ್ಕೆ ಸಹಕಾರ: ಇಸ್ರೇಲ್‌ ರಾಯಭಾರಿ

ನವದೆಹಲಿ: ಇರಾನ್ ಮತ್ತು ಇಸ್ರೇಲ್ ನಡುವಿನ ಸೇನಾ ಸಂಘರ್ಷ ನಂತರ ಭಾರತೀಯ ನಾಗರಿಕರ ಸುರಕ್ಷಿತ ಸ್ಥಳಾಂತರ ವಿಚಾರದಲ್ಲಿ ಭಾರತದ ವಿದೇಶಾಂಗ ಇಲಾಖೆ ಜತೆ ನಿರಂತರ ಸಂಪರ್ಕದಲ್ಲಿ ಇರುವುದಾಗಿ ಭಾರತದಲ್ಲಿನ ಇಸ್ರೇಲ್‌ ರಾಯಭಾರಿ ರುವೇನ್ ಅಜರ್ ತಿಳಿಸಿದ್ದಾರೆ.

'ಭಾರತ ಸರ್ಕಾರದಿಂದ ಏನೇ ಸಂದೇಶ ಬಂದರೂ ನಾಗರಿಕರ ಸುರಕ್ಷತೆ ದೃಷ್ಟಿಯಿಂದ ಗಂಭೀರವಾಗಿ ಪರಿಗಣಿಸಿದ್ದೇವೆ.

ಯುದ್ಧ ಆರಂಭವಾದ ಕ್ಷಣದಿಂದಲೇ ಈ ಸಹಕಾರ ಮುಂದುವರಿದಿದೆ' ಎಂದು ಅವರು ಶುಕ್ರವಾರ ಪಿಟಿಐಗೆ ನೀಡಿದ ಸಂದರ್ಶನದಲ್ಲಿ ಹೇಳಿದರು.

ಸಂಘರ್ಷ ಶುರುವಾಗುತ್ತಿದ್ದಂತೆ ಇಸ್ರೇಲ್‌ನಲ್ಲಿರುವ ಭಾರತೀಯ ರಾಯಭಾರ ಕಚೇರಿ ತನ್ನ ನಾಗರಿಕರಿಗೆ ಅಗತ್ಯ ಮುನ್ನೆಚ್ಚರಿಕೆ ವಹಿಸಲು ಸಲಹೆ ನೀಡಿತ್ತು. ಇಸ್ರೇಲ್‌ನ ಬೀರ್‌ಶೆಬಾ ಆಸ್ಪತ್ರೆ ಮೇಲೆ ಇರಾನ್ ಕ್ಷಿಪಣಿ ದಾಳಿ ಮಾಡುತ್ತಿದ್ದಂತೆ ವಾಪಸ್ ಬರಲು ಇಚ್ಚಿಸುವವರನ್ನು ‌'ಆಪರೇಷನ್ ಸಿಂಧು' ಮೂಲಕ ಸ್ಥಳಾಂತರಿಸಲು ಭಾರತ ಸರ್ಕಾರ ಬುಧವಾರ ನಿರ್ಧರಿಸಿತು ಎಂದು ಭಾರತದ ವಿದೇಶಾಂಗ ಇಲಾಖೆ ಹೇಳಿಕೆಯಲ್ಲಿ ತಿಳಿಸಿದೆ.

ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

Below Post Ad

Qries