HEALTH TIPS

ಅಜರುದ್ದೀನ್ ಪುತ್ರನ ರಾಜಕೀಯ ಪ್ರವೇಶ: ರಾಹುಲ್‌ ಗಾಂಧಿ ಸ್ಫೂರ್ತಿ ಎಂದು ಗುಣಗಾನ

ಹೈದರಾಬಾದ್: ಇತ್ತೀಚೆಗೆ ತೆಲಂಗಾಣ ಕಾಂಗ್ರೆಸ್‌ನ ಪ್ರಧಾನ ಕಾರ್ಯಾದರ್ಶಿಯಾಗಿ ಮಾಜಿ ಕ್ರಿಕೆಟಿಗ ಮೊಹಮ್ಮದ್ ಅಜರುದ್ದೀನ್ ಅವರ ಪುತ್ರ ಅಸಾದುದ್ದೀನ್ ನೇಮಕಗೊಂಡಿದ್ದು, ಈ ಮೂಲಕ ರಾಜಕೀಯ ಪ್ರವೇಶಿಸಿದ್ದಾರೆ.

ರಾಜಕೀಯ ಪ್ರವೇಶಿಸಲು ತಮ್ಮ ತಂದೆ ಹಾಗೂ ಕಾಂಗ್ರೆಸ್‌ ನಾಯಕ ಮತ್ತು ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್‌ ಗಾಂಧಿ ಅವರು ಸ್ಫೂರ್ತಿ ಎಂದು ಹೇಳಿಕೊಂಡಿದ್ದಾರೆ.

ಕಾಂಗ್ರೆಸ್‌ ಪಕ್ಷದ ಸಿದ್ಧಾಂತಕ್ಕೆ ಅನುಗುಣವಾಗಿ ಪಕ್ಷಕ್ಕಾಗಿ ಕೆಲಸ ಮಾಡಲು ಬದ್ಧನಾಗಿದ್ದೇನೆ. ಹಲವಾರು ಸವಾಲುಗಳನ್ನು ಎದುರಿಸುತ್ತಿದ್ದರೂ ಕಾಂಗ್ರೆಸ್‌ನ ಮೌಲ್ಯಗಳಿಗಾಗಿ ಹೋರಾಡಿದ್ದಕ್ಕಾಗಿ ರಾಹುಲ್ ಗಾಂಧಿ ಅವರನ್ನು ಅಸಾದುದ್ದೀನ್ ಶ್ಲಾಘಿಸಿದ್ದಾರೆ.

ಇತ್ತೀಚೆಗೆ ತೆಲಂಗಾಣ ಕಾಂಗ್ರೆಸ್‌ನ ಪ್ರಧಾನ ಕಾರ್ಯಾದರ್ಶಿಯಾಗಿ ಅಸಾದುದ್ದೀನ್ ನೇಮಕಗೊಂಡ ಬಳಿಕ ಮೊಹಮ್ಮದ್ ಅಜರುದ್ದೀನ್ ಅವರು ಸಾಮಾಜಿಕ ಜಾಲತಾಣ ಎಕ್ಸ್‌ನಲ್ಲಿ ಭಾವನಾತ್ಮಕ ಪೋಸ್ಟ್‌ ಅನ್ನು ಹಂಚಿಕೊಂಡಿದ್ದರು.

'ಅಸಾದುದ್ದೀನ್ ಅವರಲ್ಲಿ ಜನರಿಗೆ ಏನಾದರೂ ಮಾಡಬೇಕೆಂಬ ಹಂಬಲವಿದೆ. ಆ ನಿಟ್ಟಿನಲ್ಲಿ ಅವರ ಸೇವಾ ಮನೋಭಾವ, ಪ್ರಾಮಾಣಿಕತೆಯನ್ನು ಹತ್ತಿರದಿಂದ ನೋಡಿದ್ದೇನೆ. ಅವರು ಮೌಲ್ಯಯುತವಾದ ಮಾರ್ಗದರ್ಶನ ಪಡೆಯಲಿ. ಜತೆಗೆ ಜವಾಬ್ದಾರಿಯನ್ನು ವಹಿಸಿಕೊಂಡಿರುವುದಕ್ಕಾಗಿ ಹಾರೈಸುತ್ತೇನೆ' ಎಂದು ಅಜರುದ್ದೀನ್ ಪೋಸ್ಟ್‌ನಲ್ಲಿ ತಿಳಿಸಿದ್ದರು.

ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

Below Post Ad

Qries