ಬದಿಯಡ್ಕ: ಎಡನೀರು ಮಠಾಧೀಶ ಶ್ರೀ ಸಚ್ಚಿದಾನಂದ ಭಾರತೀ ಸ್ವಾಮೀಜಿಗಳವರ ಪಂಚಮ ಚಾತುರ್ಮಾಸ್ಯ ವ್ರತಾಚರಣೆ ಜುಲೈ 10 ರಿಂದ ಸೆಪ್ಟೆಂಬರ್ 07 ರವರೆಗೆ ವಿವಿಧ ವೈದಿಕ, ಧಾರ್ಮಿಕ, ಸಾಂಸ್ಕøತಿಕ ಕಾರ್ಯಕ್ರಮಗಳೊಂದಿಗೆ ಎಡನೀರು ಶ್ರೀಮಠದಲ್ಲಿ ಜರಗಲಿದೆ.
ಕಾರ್ಯಕ್ರಮದ ಯಶಸ್ವಿಗಾಗಿ ಊರ ಪರಪೂರ ಭಕ್ತಾದಿಗಳ ವಿವಿಧ ಸಮಿತಿಗಳ ಮಹಾಸಭೆ ಜೂ. 22ನೇ ಭಾನುವಾರ ಸಂಜೆ 4.30ಕ್ಕೆ ಎಡನೀರು ಶ್ರೀಮಠದಲ್ಲಿ ಜರಗಲಿದೆ. ವಿವಿಧ ಸಮಿತಿಯ ಪದಾಧಿಕಾರಿಗಳು ಹಾಗೂ ಶ್ರೀಮಠದ ಭಕ್ತಾದಿಗಳು ಈ ಸಭೆಯಲ್ಲಿ ಭಾಗವಹಿಸಿ ಕಾರ್ಯಕ್ರಮವನ್ನು ಯಶಸ್ವಿಗೊಳಿಸಬೇಕಾಗಿ ಮಠದ ಪ್ರಕಟಣೆಯಲ್ಲಿ ವಿನಂತಿಸಲಾಗಿದೆ.

-SWAMIJI.jpg)
