ಕಾಸರಗೋಡು: ನಾಡೋಜ ಡಾ. ಕಯ್ಯಾರ ಕಿಞ್ಞಣ್ಣ ರೈ ಜನ್ಮದಿನೋತ್ಸವ ಸಂಭ್ರಮ 2025 ಜೂನ್ 8 ಅಪರಾಹ್ನ 3ಕ್ಕೆ ಕಾಸರಗೋಡು ನುಳ್ಳಿಪ್ಪಾಡಿಯ ಸೀತಮ್ಮ ಪುರುಷ ನಾಯಕ ಕನ್ನಡ ಭವನ ಸಭಾಂಗಣದಲ್ಲಿ ಜರುಗಲಿದೆ. ಕನ್ನಡ ಭವನ ಗ್ರಂಥಾಲಯ (ರಿ) ಮತ್ತು ಕೇರಳ ರಾಜ್ಯ- ಕನ್ನಡ ಚುಟುಕು ಸಾಹಿತ್ಯ ಪರಿಷತ್ತು ಕೇಂದ್ರ ಸಮಿತಿಯ ಆಶ್ರಯದಲ್ಲಿ ಕಾರ್ಯಕ್ರಮ ನಡೆಯುವುದು.
ಈ ಸಂದರ್ಭ ವೈದ್ಯ ಸಾಹಿತಿ ಡಾ. ರಮಾನಂದಬನಾರಿ, ಸಾಹಿತಿ ಡಾ. ಶಿವಾನಂದ ಬೇಕಲ್, ಆಕಾಶವಾಣಿ ನಿವೃತ್ತ ಅಧಿಕಾರಿಗಳು ಹಾಗೂ ಸಾಹಿತಿಗಳಾದ ಡಾ. ವಸಂತ್ ಕುಮಾರ್ ಪೆರ್ಲ, ಡಾ. ಸದಾನಂದ ಪೆರ್ಲ ಅವರಿಗೆ ಕನ್ನಡ ಭವನದ ಪ್ರತಿಷ್ಠಿತ ಪ್ರಶಸ್ತಿ"ನಾಡೋಜ ಡಾಟ ಕಯ್ಯಾರ ರಾಷ್ಟ್ರೀಯ ಪ್ರಶಸ್ತಿ-2025" ನೀಡಿ ಗೌರವಿಸಲಾಗುವುದು ಎಂದು ಕನ್ನಡ ಭವನದ ಪ್ರಶಸ್ತಿ ಆಯ್ಕೆ ಸಮಿತಿ ಪ್ರಕಟಣೆ ತಿಳಿಸಿದೆ.






