HEALTH TIPS

ಸೇವಾ ಭಾರತಿ ಬದಿಯಡ್ಕ ಪಂಚಾಯಿತಿ ಘಟಕದಿಂದ ರಕ್ತದಾನ ಶಿಬಿರ

ಬದಿಯಡ್ಕ: ನಮ್ಮ ಆರೋಗ್ಯವನ್ನು ನಾವು ಕಾಪಾಡಿಕೊಳ್ಳುವುದು ಅತೀಮುಖ್ಯ. ಪ್ರತಿಯೊಂದು ಘಟ್ಟವನ್ನೂ ಸುಧಾರಿಸಿಕೊಂಡು ಮುಂದುವರಿಯುತ್ತಾ ಸಮಾಜಮುಖಿಯಾಗಿ ಜೀವಿಸಬೇಕು. ನಿಸ್ವಾರ್ಥ ಮನೋಭಾವದ ಸೇವಾಕಾರ್ಯವು ನಮ್ಮನ್ನು ಎತ್ತರಕ್ಕೆ ಕೊಂಡೊಯ್ಯುತ್ತದೆ. ಸಂಘಟನೆಯ ಮೂಲಕ ನಿರಂತರ ಸೇವಾ ಮನೋಭಾವವನ್ನು ಹೊಂದಿರುವ ಯುವಕರು ನಾಡಿಗೆ ಮಾದರಿಯಾಗಿದ್ದಾರೆ ಎಂದು ಧಾರ್ಮಿಕ ಸಾಮಾಜಿಕ ಪ್ರಮುಖರಾದ ಜಯದೇವ ಖಂಡಿಗೆ ಹೇಳಿದರು.

ಸೇವಾ ಭಾರತಿ ಬದಿಯಡ್ಕ ಪಂಚಾಯಿತಿ ಘಟಕದ ನೇತೃತ್ವದಲ್ಲಿ ಕಾಸರಗೋಡು ಸರ್ಕಾರಿ ಜನರಲ್ ಆಸ್ಪತ್ರೆಯ ಸಹಯೋಗದೊಂದಿಗೆ ನೀರ್ಚಾಲು ಮಹಾಜನ ಸಂಸ್ಕøತ ಕಾಲೇಜು ಹೈಸ್ಕೂಲಿನಲ್ಲಿ ಭಾನುವಾರ ಜರಗಿದ ರಕ್ತದಾನ ಶಿಬಿರಕ್ಕೆ ಚಾಲನೆಯನ್ನು ನೀಡಿ ಅವರು ಮಾತನಾಡಿದರು. 


ಕಾಸರಗೋಡು ಬ್ಲಡ್ ಬ್ಯಾಂಕ್ ವೈದ್ಯಾಕಾರಿ ಸೌಮ್ಯಾ ಅವರು ಮಾತನಾಡಿ ಆರೋಗ್ಯವಂತ ವ್ಯಕ್ತಿಯು ವರ್ಷಕ್ಕೆ ನಾಲ್ಕು ಬಾರಿ ರಕ್ತದಾನ ಮಾಡಬಹುದಾಗಿದೆ. ಅನೇಕರು ಹೆದರಿಕೆಯಿಂದ ರಕ್ತದಾನ ಮಾಡಲು ಹಿಂಜರಿಯುತ್ತಿದ್ದಾರೆ. ಯುವಕರು ಈ ನಿಟ್ಟಿನಲ್ಲಿ ಜಾಗೃತರಾಗಬೇಕು. ಸೇವಾ ಭಾರತಿಯಂತಹ ಸಂಘಟನೆಗಳ ಮೂಲಕ ಎಲ್ಲರೂ ಸಂಘಟಿತರಾಗಿ ಯಾವುದೇ ಸಂದರ್ಭದಲ್ಲಿ ರಕ್ತದಾನ ಮಾಡಲು ಮುಂದೆ ಬರಬೇಕು ಎಂದರು. 

ಸೇವಾ ಭಾರತಿ ಬದಿಯಡ್ಕ ಪಂಚಾಯಿತಿ ಘಟಕದ ಅಧ್ಯಕ್ಷ ಸದಾಶಿವ ಮಾಸ್ತರ್ ಬೇಳ, ಕೋಶಾಧಿಕಾರಿ ವಕೀಲ ಗಣೇಶ್ ಬಿ. ಬದಿಯಡ್ಕ, ಆರೆಸ್ಸೆಸ್ ಖಂಡಚಾಲಕ್ ರಮೇಶ್ ಕಳೇರಿ, ಸೇವಾ ಭಾರತಿ ಕಾಸರಗೋಡು ಜಿಲ್ಲಾ ರಕ್ತನಿಧಿ ಪ್ರಮುಖ ದಯಾನಂದ ಭಟ್ ಕಾಸರಗೋಡು, ಸೇವಾ ಭಾರತಿ ಸ್ವಯಂಸೇವಕರು ಪಾಲ್ಗೊಂಡಿದ್ದರು. ಒಟ್ಟು 85 ಮಂದಿ ರಕ್ತದಾನಕ್ಕೆ ಸಿದ್ಧರಿದ್ದರು. ಅರ್ಹರಾದ 65 ಮಂದಿ ದಾನಿಗಳು ರಕ್ತದಾನ ಮಾಡಿದರು. ಸೇವಾ ಭಾರತಿಯ ನೇತೃತ್ವದಲ್ಲಿ ನೀರ್ಚಾಲಿನಲ್ಲಿ ಈ ಹಿಂದೆಯೂ ನಾಲ್ಕು ಬಾರಿ ರಕ್ತದಾನ ಶಿಬಿರ ನಡೆದಿತ್ತು.



ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

Below Post Ad

Qries