HEALTH TIPS

Mumbai Attack: ತಹವ್ವುರ್ ರಾಣಾ ನ್ಯಾಯಾಂಗ ಬಂಧನ ಜುಲೈ 9ರವೆರೆಗೆ ವಿಸ್ತರಣೆ

ನವದೆಹಲಿ: ಮುಂಬೈ ಮೇಲಿನ ಭಯೋತ್ಪಾದಕ ದಾಳಿ (26/11) ಪ್ರಕರಣದ ಆರೋಪಿ ತಹವ್ವುರ್ ಹುಸೇನ್ ರಾಣಾ ನ್ಯಾಯಾಂಗ ಬಂಧನವನ್ನು ದೆಹಲಿ ನ್ಯಾಯಾಲಯವು ಜುಲೈ 9ರವರೆಗೆ ವಿಸ್ತರಿಸಿದೆ. 

ಈ ಸಂಬಂಧ ವಿಶೇಷ ನ್ಯಾಯಾಧೀಶ ಚಂದರ್ ಜಿತ್ ಸಿಂಗ್ ಅವರು ಆದೇಶವನ್ನು ಹೊರಡಿಸಿದ್ದಾರೆ.

ರಾಣಾನನ್ನು ವಿಡಿಯೊ ಕಾನ್ಫರೆನ್ಸ್ ಮೂಲಕ ನ್ಯಾಯಾಲಯದ ಮುಂದೆ ಹಾಜರುಪಡಿಸಲಾಯಿತು. ರಾಣಾ ಆರೋಗ್ಯದ ಬಗ್ಗೆ ವಕೀಲ ಕಳವಳ ವ್ಯಕ್ತಪಡಿಸಿದ್ದ ಹಿನ್ನೆಲೆಯಲ್ಲಿ ತಿಹಾರ್ ಜೈಲಿನಿಂದ ಆರೋಗ್ಯ ಸ್ಥಿತಿ ಕುರಿತು ನ್ಯಾಯಾಧೀಶರು ವಿಚಾರಿಸಿದರು.

ಮುಂಬೈ ದಾಳಿಯ ಸಂಚುಕೋರನಾದ ಅಮೆರಿಕದ ಪ್ರಜೆ ಡೇವಿಡ್ ಕೋಲ್ಮನ್ ಹೆಡ್ಲಿ ಅಲಿಯಾಸ್ ದಾವೂದ್ ಗಿಲಾನಿಯ ನಿಕಟವರ್ತಿಯಾದ ರಾಣಾನನ್ನು ಅಮೆರಿಕದಿಂದ ಭಾರತಕ್ಕೆ ಕರೆತರಲಾಗಿತ್ತು.

ಕಳೆದ ತಿಂಗಳು ರಾಣಾನನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿತ್ತು.

2008ರ ನವೆಂಬರ್ 26ರಂದು ಮುಂಬೈ ಮೇಲೆ ನಡೆದ ಉಗ್ರರ ದಾಳಿಯಲ್ಲಿ 166 ಮಂದಿ ಮೃತಪಟ್ಟಿದ್ದರು.

ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

Below Post Ad

Qries