HEALTH TIPS

Plane Crash | ಆಕಸ್ಮಿಕ ಸಾವು ಪ್ರಕರಣ ದಾಖಲಿಸಿದ ಪೊಲೀಸರು

ನವದೆಹಲಿ: ಗುಜರಾತ್‌ನ ಅಹಮದಾಬಾದ್‌ನಲ್ಲಿ ಸಂಭವಿಸಿದ್ದ ಏರ್‌ ಇಂಡಿಯಾ ವಿಮಾನ ದುರಂತ ಕುರಿತು ಮೇಘಾನಿ ನಗರದ ಪೊಲೀಸರು ಆಕಸ್ಮಿಕ ಸಾವು ಪ್ರಕರಣ (UD/0019/2025) ದಾಖಲಿಸಿಕೊಂಡಿದ್ದಾರೆ. 

ಇದು ಎಫ್‌ಐಆರ್ ಅಲ್ಲ. ಬದಲಾಗಿ ಪೊಲೀಸ್ ಠಾಣೆಯ ಡೈರಿಯಲ್ಲಿ ಘಟನೆಯ ನೋಂದಣಿಯಾಗಿದ್ದು, ತನಿಖೆಯ ಫಲಿತಾಂಶದ ಆಧಾರದ ಮೇಲೆ ಇದನ್ನು ಭಾರತೀಯ ನಾಗರಿಕ ಸುರಕ್ಷಾ ಸಂಹಿತೆಯ (ಬಿಎನ್‌ಎಸ್‌ಎಸ್) ಸೆಕ್ಷನ್ 194ರ ಅಡಿಯಲ್ಲಿ ಎಫ್‌ಐಆರ್ ಆಗಿ ಪರಿವರ್ತಿಸಬಹುದು.

ಆತ್ಮಹತ್ಯೆ, ಅಸ್ವಾಭಾವಿಕ ಸಾವು ಅಥವಾ ಅನುಮಾನಾಸ್ಪದ ಸಾವುಗಳಂತಹ ಆಕಸ್ಮಿಕ ಸಾವುಗಳ ಪ್ರಕರಣಗಳಲ್ಲಿ ಪಂಚನಾಮ ನಡೆಸಲು ಪೊಲೀಸರು ತಕ್ಷಣವೇ ಮ್ಯಾಜಿಸ್ಟ್ರೇಟ್‌ಗೆ ತಿಳಿಸಬೇಕೆಂದು ನಿಯಮವಾಗಿದೆ. ಅಂತಹ ಪ್ರಕರಣಗಳನ್ನು ಪೊಲೀಸರು ಆಕಸ್ಮಿಕ ಸಾವು ಎಂದು ಕರೆಯುತ್ತಾರೆ.

ವಿಮಾನ ದುರಂತದಲ್ಲಿ ಒಟ್ಟು 270 ಜನರು ಮೃತಪಟ್ಟಿದ್ದಾರೆ ಎಂದು ವರದಿಯಾಗಿದೆ‌. ಈ ಪೈಕಿ ವಿಮಾನದಲ್ಲಿದ್ದ 241 ಮಂದಿ, ಬಿ.ಜೆ. ವೈದ್ಯಕೀಯ ಕಾಲೇಜಿನ ನಾಲ್ವರು ಎಂಬಿಬಿಎಸ್ ವಿದ್ಯಾರ್ಥಿಗಳು, ವೈದ್ಯರ ಕುಟುಂಬದ ನಾಲ್ವರು ಸದಸ್ಯರು, ಚಹಾ ಮಾರಾಟಗಾರರ ಕುಟುಂಬ ಸದಸ್ಯರು ಸೇರಿದಂತೆ ಇತರರು ಸಾವಿಗೀಡಾಗಿದ್ದಾರೆ.

ಗುರುವಾರ ಮಧ್ಯಾಹ್ನ ಅಹಮದಾಬಾದ್‌ನ ಸರ್ದಾರ್ ವಲ್ಲಭಭಾಯಿ ಪಟೇಲ್ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದಿಂದ ಲಂಡನ್‌ಗೆ ಹೊರಟಿದ್ದ ಏರ್‌ ಇಂಡಿಯಾ ವಿಮಾನವು ಟೇಕಾಫ್‌ ಆದ ಕೆಲವೇ ಕ್ಷಣಗಳಲ್ಲಿ ಪತನಗೊಂಡು, ಗುಜರಾತ್‌ನ ಮಾಜಿ ಮುಖ್ಯಮಂತ್ರಿ ವಿಜಯ್‌ ರೂಪಾನಿ ಸೇರಿದಂತೆ ಕನಿಷ್ಠ 270 ಮಂದಿ ಮೃತಪಟ್ಟಿದ್ದರು.

ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

Below Post Ad

Qries