ಬದಿಯಡ್ಕ: ಜಗದ್ಗುರು ಶಂಕರಾಚಾರ್ಯ ಸಂಸ್ಥಾನಮ್ ಶ್ರೀ ಎಡನೀರು ಮಠದಲ್ಲಿ ಪರಮಪೂಜ್ಯ ಶ್ರೀ ಸಚ್ಚಿದಾನಂದ ಭಾರತೀ ಶ್ರೀಗಳವರ ಪಂಚಮ ಚಾತುರ್ಮಾಸ್ಯ ವ್ರತಾಚರಣೆ ಜುಲೈ 10 ರಿಂದ ಸಪ್ಟಂಬರ್ 7ರ ತನಕ ವಿವಿಧ ವೈದಿಕ, ಧಾರ್ಮಿಕ, ಸಾಂಸ್ಕøತಿಕ ಕಾರ್ಯಕ್ರಮಗಳೊಂದಿಗೆ ಜರಗಲಿರುವುದು. ಜುಲೈ 10 ರಂದು ಬೆಳಗ್ಗೆ 8 ರಿಂದ ವ್ಯಾಸಪೂಜೆ, ಚಾತುರ್ಮಾಸ್ಯ ವ್ರತ ಸಂಕಲ್ಪ, ಹೋಮಗಳ ಪೂರ್ಣಾಹುತಿ. 9 ಗಂಟೆಯಿಂದ 60 ದಿನಗಳ ಭಜನಾ ಕಾರ್ಯಕ್ರಮ ಆರಂಭ, ಶ್ರೀ ಗೋಪಾಲಕೃಷ್ಣ ಮಹಿಳಾ ಭಜನಾ ಮಂಡಳಿ ಎಡನೀರು ಇವರಿಂದ ಭಜನೆಗೆ ಚಾಲನೆ, 11 ರಿಂದ ಬ್ರಹ್ಮಶ್ರೀ ವಾಸುದೇವ ತಂತ್ರಿ ಕುಂಟಾರು ಮತ್ತು ಬಳಗದವರಿಂದ ಭಕ್ತಿ ಸಂಗೀತ, ಮಧ್ಯಾಹ್ನ 12.30ಕ್ಕೆ ಮಹಾಪೂಜೆ, ಅಪರಾಹ್ನ 2.30 ರಿಂದ ಸಾಂಸ್ಕøತಿಕ ಕಾರ್ಯಕ್ರಮಗಳ ಉದ್ಘಾಟನೆ. ಶ್ರೀಮದ್ವಾಚಾರ್ಯ ಮೂಲ ಸಂಸ್ಥಾನಮ್ ಚಿತ್ರಾಪುರ ಮಠದ ಶ್ರೀ ವಿದ್ಯೇಂದ್ರತೀರ್ಥ ಶ್ರೀಪಾದಂಗಳವರ ದಿವ್ಯ ಉಪಸ್ಥಿತಿ, ಆಶೀರ್ವಚನ. ಮೂಡಬಿದಿರೆ ಆಳ್ವಾಸ್ ಶಿಕ್ಷಣ ಸಂಸ್ಥೆಯ ಅಧ್ಯಕ್ಷ ಎಂ.ಮೋಹನ ಆಳ್ವ ಅವರಿಂದ ಉದ್ಘಾಟನೆ, ಕಾಪು ಶಾಸಕ ಸುರೇಶ್ ಶೆಟ್ಟಿ ಗುರ್ಮೆ ಅಧ್ಯಕ್ಷತೆ ವಹಿಸುವರು.
ಶ್ರೀಮಠದ `ಆನಂದ ಭಾರತಿ' ಯೂಟ್ಯೂಬ್ ಚಾನೆಲ್ ಲೋಕಾರ್ಪಣೆ :
ಶ್ರೀ ಎಡನೀರು ಮಠದ ಯೂಟ್ಯೂಬ್ ಚಾನೆಲ್ `ಆನಂದ ಭಾರತಿ'ಯ ಲೋಕಾರ್ಪಣೆ ಈ ಸಂದರ್ಭದಲ್ಲಿ ನಡೆಯಲಿದೆ. ಉದ್ಯಮಿ ಇ.ಮಹಾಬಲೇಶ್ವರ ಭಟ್ ಅವರಿಂದ ಚಾನೆಲ್ ಲೋಕಾರ್ಪಣೆ ನಡೆಯಲಿದೆ. ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕøತ ಬಿ.ಸೀತಾರಾಮ ತೋಳ್ಪಡಿತ್ತಾಯ ಅವರು ಶುಭಾಶಂಸನೆಗೈಯುವರು.
ವೇಣುನಿನಾದ :
ಸಾಂಸ್ಕøತಿಕ ಕಾರ್ಯಕ್ರಮದ ಅಂಗವಾಗಿ ಅಪರಾಹ್ನ 4.30ರಿಂದ ವೇಣು ನಿನಾದ ಕಾರ್ಯಕ್ರಮ ಜರಗಲಿದೆ. ವಿದ್ವಾನ್ ಶಶಾಂಕ ಸುಬ್ರಹ್ಮಣ್ಯಂ ಚೆನ್ನೈ ಕೊಳಲಿನಲ್ಲಿ, ವಯಲಿನ್ನಲ್ಲಿ ವಿಠಲ ರಾಮಮೂರ್ತಿ ಚೆನ್ನೈ, ಮೃದಂಗದಲ್ಲಿ ವಿದ್ವಾನ್ ಪತ್ರಿ ಸತೀಶ್ ಕುಮಾರ್ ಚೆನ್ನೈ ಭಾಗವಹಿಸುವರು.


