HEALTH TIPS

ಬ್ರಹ್ಮೋಸ್ ಕ್ಷಿಪಣಿಗೆ 15 ದೇಶಗಳಿಂದ ಬೇಡಿಕೆ: ರಾಜನಾ‌ಥ್ ಸಿಂಗ್

ಲಖನೌ: ಬ್ರಹ್ಮೋಸ್ ಕ್ಷಿಪಣಿಯು ಆಪರೇಷನ್‌ ಸಿಂಧೂರದಲ್ಲಿ ನಿರ್ಣಾಯಕ ಪಾತ್ರವಹಿಸಿದೆ ಎಂದು ರಕ್ಷಣಾ ಸಚಿವ ಭಾನುವಾರ ಹೇಳಿದರು.

ಈ ಕಾರ್ಯಾಚರಣೆ ಬಳಿಕ 14 ರಿಂದ 15 ದೇಶಗಳು ಬ್ರಹ್ಮೋಸ್‌ ಕ್ಷಿಪಣಿಗಾಗಿ ಬೇಡಿಕೆ ಇರಿಸಿವೆ ಎಂದು ತಿಳಿಸಿದ್ದಾರೆ.

ಬ್ರಹ್ಮೋಸ್ ಕ್ಷಿಪಣಿಯನ್ನು ಈಗ ಲಖನೌನಿಂದಲೂ ರಫ್ತು ಮಾಡಲಾಗುವುದು. ಇದು ನಮ್ಮ ದೇಶವನ್ನು ರಕ್ಷಣಾ ವಲಯದಲ್ಲೂ ಸ್ವಾವಲಂಬಿಯಾಗಿ ಮಾಡುತ್ತದೆ ಮತ್ತು ಉದ್ಯೋಗ ಸಹ ಸೃಷ್ಟಿ ಮಾಡುತ್ತದೆ' ಎಂದು ರಾಜನಾಥ್ ಸಿಂಗ್ ಹೇಳಿದ್ದಾರೆ.

ಕಟ್ಟುನಿಟ್ಟಿನ ಕಾನೂನು ಸುವ್ಯವಸ್ಥೆ ಮತ್ತು ಮೂಲಸೌಕರ್ಯಗಳಿಂದಾಗಿ ಉತ್ತರ ಪ್ರದೇಶವು ಹೆಚ್ಚು ಹೆಚ್ಚು ಕೈಗಾರಿಕೆಗಳನ್ನು ಆಕರ್ಷಿಸುತ್ತಿದೆ ಎಂದು ಅವರು ಪ್ರತಿಪಾದಿಸಿದ್ದಾರೆ. 'ಮೂಲಸೌಕರ್ಯದಲ್ಲಿ ಐತಿಹಾಸಿಕ ಬದಲಾವಣೆ ಆಗುತ್ತಿವೆ. ಎಕ್ಸ್‌ಪ್ರೆಸ್ ವೇ, ವಿಮಾನ ನಿಲ್ದಾಣ, ವೈದ್ಯಕೀಯ ಕಾಲೇಜು ಇವೆಲ್ಲವೂ ಅಭಿವೃದ್ಧಿಯ ಹೊಸ ಚಿತ್ರಣವನ್ನು ನಿರೂಪಿಸುತ್ತವೆ' ಎಂದು ಅವರು ಹೇಳಿದ್ದಾರೆ.

ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

Below Post Ad

Qries