HEALTH TIPS

ಮಧ್ಯಪ್ರದೇಶ: ₹20ಕ್ಕೆ ಚಿಕಿತ್ಸೆ ನೀಡುತ್ತಿದ್ದ ಡಾ.ದಾವರ್‌ ನಿಧನ

ಜಬಲ್ಪುರ : ರೋಗಿಗಳಿಂದ ಕೇವಲ ₹20 ಶುಲ್ಕ ಪಡೆದು ಚಿಕಿತ್ಸೆ ನೀಡುತ್ತಿದ್ದ, ಪದ್ಮಶ್ರೀ ಪುರಸ್ಕೃತ ಡಾ.ಮುನೀಶ್ವರ್‌ ಚಂದ್ರ ದಾವರ್‌ (79) ಅವರು ವಯೋಸಹಜ ಕಾಯಿಲೆಯಿಂದ ಶುಕ್ರವಾರ ಮೃತಪಟ್ಟರು.

ಗುಪ್ತೇಶ್ವರ ಮುಕ್ತಿಧಾಮದಲ್ಲಿ ಸಂಜೆ 4 ಗಂಟೆಗೆ ಅಂತ್ಯಕ್ರಿಯೆ ನಡೆಯಿತು.

ಸಹ ವೈದ್ಯರು ಹಾಗೂ ದಾವರ್‌ ಅವರಿಂದ ಚಿಕಿತ್ಸೆ ಪಡೆದಿದ್ದ ಅನೇಕರು ಪಾಲ್ಗೊಂಡಿದ್ದರು.

1946ರ ಜನವರಿ 16ರಂದು ಪಾಕಿಸ್ತಾನ ಪ್ರಾಂತ್ಯದ ಪಂಜಾಬ್‌ನಲ್ಲಿ ಜನಿಸಿದ ದಾವರ್‌, ದೇಶ ವಿಭಜನೆ ಸಂದರ್ಭ ಅವರ ಕುಟುಂಬ ಭಾರತಕ್ಕೆ ಸ್ಥಳಾಂತರಗೊಂಡಿತ್ತು. 1967ರಲ್ಲಿ ಜಬಲ್ಪುರ ವೈದ್ಯಕೀಯ ಕಾಲೇಜಿನಲ್ಲಿ ಎಂಬಿಬಿಎಸ್‌ ಪೂರ್ಣಗೊಳಿಸಿದ್ದರು. ಭಾರತ- ಪಾಕಿಸ್ತಾನದ ನಡುವೆ 1971ರಲ್ಲಿ ನಡೆದ ಯುದ್ಧದ ಸಂದರ್ಭದಲ್ಲಿ ಸುಮಾರು ಒಂದು ವರ್ಷ ಭಾರತೀಯ ಸೇನೆಯಲ್ಲಿ ಕಾರ್ಯನಿರ್ವಹಿಸಿದ್ದರು. ಜಬಲ್ಪುರಕ್ಕೆ ಮರಳಿದ ಬಳಿಕ 1972ರಲ್ಲಿ ವೈದ್ಯಕೀಯ ಅಭ್ಯಾಸ ಪ್ರಾರಂಭಿಸಿ, ಕೇವಲ ₹2ಕ್ಕೆ ಚಿಕಿತ್ಸೆ ನೀಡಲಾರಂಭಿಸಿದ್ದರು. ಬಳಿಕ, ₹5, ₹10, ₹15 ಹಾಗೂ ₹20ರವರೆಗೆ ಶುಲ್ಕ ಏರಿಸಿದ್ದರು. ಇವರ ಸಾಧನೆಗೆ 2023ರಲ್ಲಿ ಪದ್ಮಶ್ರೀ ಪ್ರಶಸ್ತಿ ಸಂದಿತ್ತು.

ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

Below Post Ad

Qries