HEALTH TIPS

​AirIndia: ತಾಂತ್ರಿಕ ದೋಷ, ದೋಹಾಗೆ ಹೊರಟಿದ್ದ ಏರ್ ಇಂಡಿಯಾ ವಿಮಾನ ಕೋಝಿಕ್ಕೋಡ್​ಗೆ ವಾಪಸ್

ತಿರುವನಂತಪುರಂ: ದೋಹಾಗೆ ಹೊರಟಿದ್ದ ಏರ್ ಇಂಡಿಯಾ ವಿಮಾನ ದಲ್ಲಿ ತಾಂತ್ರಿಕ ದೋಷ ಕಾಣಿಸಿಕೊಂಡ ಹಿನ್ನೆಲೆಯಲ್ಲಿ ವಿಮಾನವು ಕೇರಳದ ಕೋಳಿಕ್ಕೋಡ್​ಗೆ ವಾಪಸಾಗಿದೆ. ಟೇಕ್ ಆಫ್ ಆಗಿ ಸ್ವಲ್ಪ ಸಮಯದಲ್ಲೇ ಮತ್ತೆ ಕೋಳಿಕ್ಕೋಡ್​ಗೆ ಹಿಂದಿರುಗಿದೆ. ಬೋಯಿಂಗ್ 737 ವಿಮಾನವು ಬೆಳಗ್ಗೆ 9.17ಕ್ಕೆ ಕೋಳಿಕ್ಕೋಡ್​​ನಿಂದ ಹೊರಟಿತ್ತು.

ಸ್ವಲ್ಪ ಸಮಯದ ಬಳಿಕ ಮುನ್ನೆಚ್ಚರಿಕೆ ಕ್ರಮವಾಗಿ ಮೂಲ ವಿಮಾನ ನಿಲ್ದಾಣಕ್ಕೆ ಹಿಂದಿರುಗಲು ಸೂಚಿಸಲಾಯಿತು.

ಪ್ರಯಾಣಿಕರು ಪರ್ಯಾಯ ವಿಮಾನದಲ್ಲಿ ದೋಹಾಗೆ ಹೊರಟರು. ಮಂಗಳವಾರ ಹಾಂಗ್​ಕಾಂಗ್​ನಿಂದ ದೆಹಲಿಗೆ ಹೋಗುತ್ತಿದ್ದ ಏರ್​ ಇಂಡಿಯಾ ವಿಮಾನದಲ್ಲಿ ಬೆಂಕಿ ಕಾಣಿಸಿಕೊಂಡಿತ್ತು. ಸೋಮವಾರ ದೆಹಲಿಯಿಂದ ಕೋಲ್ಕತ್ತಾಗೆ ಹೊರಟಿದ್ದ ಮತ್ತೊಂದು ಏರ್ ಇಂಡಿಯಾ ವಿಮಾನದಲ್ಲಿ ತಾಂತ್ರಿಕ ದೋಷ ಕಾಣಿಸಿಕೊಂಡಿತ್ತು. 160 ಪ್ರಯಾಣಿಕರನ್ನು ಸುರಕ್ಷಿತವಾಗಿ ಕೆಳಗಿಳಿಸಲಾಯಿತು.

ಮತ್ತೊಂದು ಘಟನೆಯಲ್ಲಿ ಕೊಚ್ಚಿಯಿಂದ ಮುಂಬೈಗೆ ಹೊರಟಿದ್ದ ವಿಮಾನವು ಮುಂಬೈನ ರನ್​ವೇನಲ್ಲಿ ಸ್ಕಿಡ್ ಆಗಿತ್ತು. ಪ್ರಯಾಣಿಕರು ಮತ್ತು ಸಿಬ್ಬಂದಿಯ ಸುರಕ್ಷತೆಯು ನಮ್ಮ ಪ್ರಮುಖ ಆದ್ಯತೆಯಾಗಿದೆ ಏರ್ ಇಂಡಿಯಾ ವಕ್ತಾರರು ತಿಳಿಸಿದ್ದಾರೆ.ವಿಮಾನವನ್ನು ಹೆಚ್ಚಿನ ಬಳಕೆಗೆ ಅನುಮತಿಸುವ ಮೊದಲು ಅಗತ್ಯ ತಪಾಸಣೆಗಳನ್ನು ನಡೆಸಲಾಗುತ್ತಿದೆ ಎಂದು ಹೇಳಿದರು.

ಕೊಚ್ಚಿಯಿಂದ ಆಗಮಿಸುತ್ತಿರುವ ವಿಮಾನವು ಜುಲೈ 21 ರಂದು ಬೆಳಗ್ಗೆ 9.27 ಕ್ಕೆ ಮುಂಬೈನ ಛತ್ರಪತಿ ಶಿವಾಜಿ ಮಹಾರಾಜ್ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ (CSMIA) ಇಳಿಯಿತು. ಎಲ್ಲಾ ಪ್ರಯಾಣಿಕರು ಮತ್ತು ಸಿಬ್ಬಂದಿ ಸುರಕ್ಷಿತರಾಗಿದ್ದಾರೆ. ವಿಮಾನ ನಿಲ್ದಾಣದ ಪ್ರಾಥಮಿಕ ರನ್‌ವೇಗೆ ಸಣ್ಣಪುಟ್ಟ ಹಾನಿಗಳು ವರದಿಯಾಗಿವೆ.

ಮುಂದಿನ ಎರಡು ದಿನಗಳಲ್ಲಿ ಮುಂಬೈ ನಿವಾಸಿಗಳು ಮತ್ತಷ್ಟು ಮಳೆ ಎದುರಿಸಲು ಸಿದ್ಧರಾಗಬೇಕು. ಮುಂದಿನ 48 ಗಂಟೆಗಳಲ್ಲಿ ಮಳೆ ಇನ್ನಷ್ಟು ತೀವ್ರವಾಗುವ ನಿರೀಕ್ಷೆಯಿದೆ ಮತ್ತು ಬಲವಾದ ಗಾಳಿ ಮತ್ತು ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ ಎಂದು ಭಾರತ ಹವಾಮಾನ ಇಲಾಖೆ (ಐಎಂಡಿ) ಹೇಳಿದೆ. ನಿರಂತರ ಮಳೆಯಿಂದಾಗಿ, ನಗರದ ಅನೇಕ ಪ್ರಮುಖ ರಸ್ತೆಗಳು ಜಲಾವೃತಗೊಂಡಿದ್ದು, ಸಂಚಾರ ದಟ್ಟಣೆ ಉಂಟಾಗಿದೆ. ಈ ವಾರದ ಆರಂಭದಲ್ಲಿ, ಅಂಧೇರಿ ಸಬ್‌ವೇ ಕೂಡ ಪ್ರವಾಹಕ್ಕೆ ಸಿಲುಕಿ ಜನರನ್ನು ಸುರಕ್ಷಿತವಾಗಿಡಲು ಸ್ವಲ್ಪ ಸಮಯದವರೆಗೆ ಮುಚ್ಚಬೇಕಾಯಿತು.

ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

Below Post Ad

Qries