ಕಾಸರಗೋಡು: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ.ಸಿ. ಟ್ರಸ್ಟ್ ಕಾಸರಗೋಡು-ಮಂಜೇಶ್ವರ ತಾಲೂಕು, ಶೌರ್ಯ ವಿಪತ್ತು ನಿರ್ವಹಣಾ ಸಮಿತಿ ನೇತೃತ್ವದಲ್ಲಿ ಕಾಸರಗೋಡು ಮಂಜೇಶ್ವರ ತಾಲೂಕಿನ ಶೌರ್ಯ ಸ್ವಯಂ ಸೇವಕರ ತರಬೇತಿ ಕಾರ್ಯಗಾರವನ್ನು ಅಣಂಗೂರು ಶ್ರೀ ಶಾರದಾಂಬ ಸಭಾಂಗಣ ನಡೆಸಲಾಯಿತು.
ತರಬೇತಿ ಕಾರ್ಯಗಾರದ ಉದ್ಘಾಟನೆಯನ್ನು ಪೋಲೀಸ್ ಅಧಿಕಾರಿ ರಾಜೀವನ್ ಕಾಸರಗೋಡು ದೀಪ ಬೆಳಗಿಸಿ ಕಳೆದ 5 ವರ್ಷಗಳಿಂದ ನಿಸ್ವಾರ್ಥವಾಗಿ ಸೇವೆ ಸಲ್ಲಿಸುತ್ತಿರುವ ಶೌರ್ಯ ಸ್ವಯಂ ಸೇವಕರಿಗೆ ಶುಭ ಹಾರೈಸಿದರು. ಜಿಲ್ಲಾ ನಿರ್ದೇಶಕ ಬಾಬು ನಾಯ್ಕ ಎಸ್. ಪ್ರಾಸ್ತಾವಿಕವಾಗಿ ಮಾತನಾಡಿದರು.
ತಾಲೂಕು ಜನಜಾಗೃತಿ ವೇದಿಕೆ ಅಧ್ಯಕ್ಷ ಅಖಿಲೇಶ್ ನಗುಮುಗಂ, ಮಂಜೇಶ್ವರ ತಾಲೂಕು ಜನಜಾಗೃತಿ ವೇದಿಕೆ ಅಧ್ಯಕ್ಷ ಡಾ.ಜಯಪ್ರಕಾಶ್ ನಾರಾಯಣ ತೊಟ್ಟಿತ್ತೋಡಿ, ತಾಲೂಕು ಭಜನಾ ಪರಿಷತ್ ಅಧ್ಯಕ್ಷ ಡಾ.ವೆಂಕಟರಮಣ ಹೊಳ್ಳ ಕಾಸರಗೋಡು ಮುಖ್ಯ ಅತಿಥಿಗಳಾಗಿ ಶುಭ ಹಾರೈಸಿದರು.
ಅಖಿಲ ಕರ್ನಾಟಕ ಜನಜಾಗೃತಿ ವೇದಿಕೆ ಅಧ್ಯಕ್ಷ ವಿವೇಕ್ ಪಾಯಸ್ ಅವರು ತರಬೇತಿ ಕಾರ್ಯಗಾರದಲ್ಲಿ ಕರ್ತವ್ಯ ನಿರ್ವಹಣೆ ಬಗ್ಗೆ ಮತ್ತು ಉತ್ತಮ ಸಂಘಟನೆ ಬೆಳೆಸುವ ಕುರಿತು ಮಾಹಿತಿ ಮಾರ್ಗದರ್ಶನ ನೀಡಿದರು.
ವೇದಿಕೆಯಲ್ಲಿ ಕೇಂದ್ರ ಒಕ್ಕೂಟದ ಅಧ್ಯಕ್ಷ ಜ್ಞಾನೇಶ್ ಆಚಾರ್ಯ, ಯೋಜನಾಧಿಕಾರಿ ಮಾಧವ ಗೌಡ, ಜೈವಂತ್ ಪಟಗಾರ, ಗಣೇಶ್ ಆಚಾರ್ಯ, ಕಾಸರಗೋಡು ಮಂಜೇಶ್ವರ ತಾಲೂಕಿನ ಶೌರ್ಯ ಸಮಿತಿಯ ಮಾಸ್ಟರ್ ಗಳಾದ ಜಗದೀಶ್, ಪ್ರದೀಪ್ ಕಿರಣ್, ಕ್ಯಾಪ್ಟನ್ ಗಳಾದ ರವಿಕುಮಾರ್, ಸುರೇಂದ್ರ ಉಪಸ್ಥಿತರಿದ್ದರು. ತರಬೇತಿ ಕಾರ್ಯಗಾರದಲ್ಲಿ ಕಾಸರಗೋಡು ಮಂಜೇಶ್ವರ ತಾಲೂಕಿನ ಶೌರ್ಯ ಘಟಕಗಳ ಸಂಯೋಜಕರು, ಘಟಕ ಪ್ರತಿನಿಧಿಗಳು, ಸ್ವಯಂ ಸೇವಕರು ಭಾಗವಹಿಸಿದ್ದರು. ಕಾಸರಗೋಡು ತಾಲೂಕು ಕ್ಷೇತ್ರ ಯೋಜನಾಧಿಕಾರಿ ದಿನೇಶ್ ಸ್ವಾಗತಿಸಿ, ಮಂಜೇಶ್ವರ ತಾಲೂಕು ಕ್ಷೇತ್ರ ಯೋಜನಾಧಿಕಾರಿ ಶಶಿಕಲಾ ಸುವರ್ಣ ವಂದಿಸಿದರು. ಮೇಲ್ವಿಚಾರಕ ಗೋಪಾಲಕೃಷ್ಣ ನಿರೂಪಿಸಿದರು .

.jpg)
.jpg)
