HEALTH TIPS

ದೈವೇಚ್ಛೆಯಂತೆ ನಿವೃತ್ತಿ: ಉಪ ರಾಷ್ಟ್ರಪತಿ ಜಗದೀಪ್ ಧನಕರ್

ನವದೆಹಲಿ: ಉಪ ರಾಷ್ಟ್ರಪತಿ ಜಗದೀಪ್ ಧನಕರ್ ಅವರು ಗುರುವಾರ ತಾವು ಆಗಸ್ಟ್ 2027 ರಲ್ಲಿ ನಿವೃತ್ತರಾಗುವುದಾಗಿ ತಿಳಿಸಿದ್ದು, ಅದು "ದೈವೇಚ್ಛೆಗೆ ಒಳಪಟ್ಟಿರುತ್ತದೆ" ಎಂದು ನಗುತ್ತಾ ಹೇಳಿದ್ದಾರೆ. ದೆಹಲಿಯ ಜವಾಹರಲಾಲ್ ನೆಹರು ವಿಶ್ವವಿದ್ಯಾಲಯ(ಜೆಎನ್‌ಯು)ದಲ್ಲಿ ನಡೆದ ಕಾರ್ಯಕ್ರಮವೊಂದರಲ್ಲಿ ಮಾತನಾಡಿದ ಉಪ ರಾಷ್ಟ್ರಪತಿಗಳು ಈ ಹೇಳಿಕೆ ನೀಡಿದ್ದಾರೆ.

"ನಾನು ಸೂಕ್ತ ಸಮಯದಲ್ಲಿ, ಆಗಸ್ಟ್ 2027 ರಲ್ಲಿ ದೈವೇಚ್ಛೆಗೆ ಅನುಗುಣವಾಗಿ ನಿವೃತ್ತಿ ಹೊಂದುತ್ತೇನೆ" ಎಂದು ಜಗದೀಪ್ ಧನಕರ್ ಹೇಳಿದ್ದಾರೆ.

ಭಾರತದ 14ನೇ ಉಪ ರಾಷ್ಟ್ರಪತಿಯಾಗಿ ಜಗದೀಪ್ ಧನಕರ್ ಅವರ ಐದು ವರ್ಷಗಳ ಅಧಿಕಾವಧಿ ಆಗಸ್ಟ್ 10, 2027 ರಂದು ಕೊನೆಗೊಳ್ಳಲಿದೆ.

ವೃತ್ತಿಯಲ್ಲಿ ಹಿರಿಯ ವಕೀಲರಾಗಿರುವ ಧನಕರ್ ಅವರು 2022 ರಲ್ಲಿ ಉಪ ರಾಷ್ಟ್ರಪತಿಗಳಾಗಿ ಆಯ್ಕೆಯಾಗುವ ಮೊದಲು ಪಶ್ಚಿಮ ಬಂಗಾಳದ ರಾಜ್ಯಪಾಲರಾಗಿದ್ದರು. ಅವರನ್ನು ಬಿಜೆಪಿ ನೇತೃತ್ವದ ರಾಷ್ಟ್ರೀಯ ಪ್ರಜಾಸತ್ತಾತ್ಮಕ ಮೈತ್ರಿಕೂಟ(ಎನ್‌ಡಿಎ) ಉಪ ರಾಷ್ಟ್ರಪತಿಗಳಾಗಿ ನಾಮನಿರ್ದೇಶನ ಮಾಡಿತು.

ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

https://drive.google.com/file/d/1xvTBLBh0henjhvlJCaNItofEXO_RJIZu/view?usp=sharing

Below Post Ad

https://drive.google.com/file/d/1xvTBLBh0henjhvlJCaNItofEXO_RJIZu/view?usp=sharing

HOTEL

HOTEL
CENTURY
Qries