ಬದಿಯಡ್ಕ: ಮಾನ್ಯ ಸಮೀಪದ ಕಾರ್ಮಾರು ಶ್ರೀಮಹಾವಿಷ್ಣು ಸನ್ನಿಧಿಯಲ್ಲಿ ನಾಳೆ ಆಟಿ ತಿಂಗಳ ವಿಶೇಷ ಕಾರ್ಯಕ್ರಮ ಹಾಗೂ ಬಲಿವಾಡು ಕೂಟ ನಡೆಯಲಿದೆ.
ಬೆಳಿಗ್ಗೆ 7.30ಕ್ಕೆ ಬೆಳಿಗ್ಗಿನ ಪೂಜೆ, 8 ರಿಂದ 12 ತೆಂಗಿನಕಾಯಿ ಗಣಪತಿ ಹೋಮ, 9.30 ರಿಂದ ತುಳುವ ಮಹಾಸಭೆ ಕಾಸರಗೋಡು ತಾಲೂಕು ಸಮಿತಿಯವರಿಂದ ಮಂದಾರ ರಾಮಾಯಣ ವಾಚನ-ಪ್ರವಚನ ನಡೆಯಲಿದೆ. ಶ್ರೀಕ್ಷೇತ್ರದ ಆಡಳಿತ ಮೊಕ್ತೇಸರ ರಾಧಾಕೃಷ್ಣ ರೈ ಕಾರ್ಮಾರು ಅವರ ಅಧ್ಯಕ್ಷತೆಯಲ್ಲಿ ನಡೆಯುವ ಸಮಾರಂಭವನ್ನು ಮಂಗಳೂರಿನ ಮಂದಾರ ಪ್ರತಿಷ್ಠಾನದ ಅಧ್ಯಕ್ಷ ಡಾ.ರಾಜೇಶ್ ಭಟ್ ಮಂದಾರ ಉದ್ಘಾಟಿಸುವರು. ಬಳಿಕ ನಡೆಯುವ ಮಂದಾರ ರಾಮಾಯಣ ಸುಗಿಪು-ದುನಿಪಲ್ಲಿ ಪ್ರೊ.ಭಾಸ್ಕರ ರೈ ಕುಕ್ಕುವಳ್ಳಿ, ಪ್ರಶಾಂತ ರೈ ಪುತ್ತೂರು, ರಚನಾ ಚಿತ್ಕಲ್ ಹಾಗೂ ಲವ ಕುಮಾರ ಐಲ ಭಾಗವಹಿಸುವರು.
12.30ಕ್ಕೆ ಮಹಾಪೂಜೆ, ಬಳಿಕ ಅನ್ನಪ್ರಸಾದ ವಿತರಣೆ, ಸಂಜೆ 6.30 ರಿಂದ ದುರ್ಗಾಪೂಜೆ, ರಾತ್ರಿ 8ಕ್ಕೆ ಮಹಾಪೂಜೆ ನಡೆಯಲಿದೆ.





