HEALTH TIPS

ಮುಖ್ಯಮಂತ್ರಿ ಚಿಕಿತ್ಸೆಗಾಗಿ ಮತ್ತೆ ವಿದೇಶಕ್ಕೆ; ಇಂದು ಮಧ್ಯರಾತ್ರಿ ದುಬೈ ಮೂಲಕ ಅಮೆರಿಕಕ್ಕೆ

ತಿರುವನಂತಪುರಂ: ರಾಜ್ಯದ ಆರೋಗ್ಯ ಕ್ಷೇತ್ರದ ಸುತ್ತಲಿನ ವಿವಾದಗಳ ನಡುವೆ, ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಮತ್ತೆ ಚಿಕಿತ್ಸೆಗಾಗಿ ಅಮೆರಿಕಕ್ಕೆ ತೆರಳುತ್ತಿದ್ದಾರೆ.

ಅವರು ಇಂದು ಮಧ್ಯರಾತ್ರಿ ದುಬೈ ಮೂಲಕ ಅಮೆರಿಕಕ್ಕೆ ತೆರಳಲಿದ್ದಾರೆ. ವರದಿಗಳ ಪ್ರಕಾರ ಅವರು ಸುಮಾರು ಒಂದು ವಾರ ಅಲ್ಲಿಯೇ ಇರಲಿದ್ದಾರೆ.

ಈ ಹಿಂದೆ ಅಮೆರಿಕದಲ್ಲಿ ಚಿಕಿತ್ಸೆ ಪಡೆದಿದ್ದ ಮುಖ್ಯಮಂತ್ರಿ, ಹೆಚ್ಚಿನ ಪರೀಕ್ಷೆಗಳು ಮತ್ತು ಚಿಕಿತ್ಸೆಗಾಗಿ ಮತ್ತೆ ಅಲ್ಲಿಗೆ ತೆರಳುತ್ತಿದ್ದಾರೆ. ಮುಖ್ಯಮಂತ್ರಿ ಮಿನ್ನೇಸೋಟದ ಮೇಯೊ ಕ್ಲಿನಿಕ್‍ನಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ತಿರುವನಂತಪುರಂ ವೈದ್ಯಕೀಯ ಕಾಲೇಜಿನ ಮೂತ್ರಶಾಸ್ತ್ರ ವಿಭಾಗದ ಮುಖ್ಯಸ್ಥ ಡಾ. ಹ್ಯಾರಿಸ್ ಚಿರಾಯಕ್ಕಲ್ ತಿರುವನಂತಪುರಂ ವೈದ್ಯಕೀಯ ಕಾಲೇಜು ಆಸ್ಪತ್ರೆಯ ಸಮಸ್ಯೆಗಳನ್ನು ಎತ್ತಿ ತೋರಿಸಿ ಫೇಸ್‍ಬುಕ್ ಪೋಸ್ಟ್ ಮಾಡಿದ ನಂತರ ಹಲವಾರು ಸಮಸ್ಯೆಗಳು ಉದ್ಭವಿಸಿದ್ದವು. ಈ ಮಧ್ಯೆ, ಕೊಟ್ಟಾಯಂ ವೈದ್ಯಕೀಯ ಕಾಲೇಜಿನ ಕಟ್ಟಡ ಕುಸಿದು ಮಹಿಳೆಯೊಬ್ಬರು ಸಾವನ್ನಪ್ಪಿದರು. ಇದು ವಿವಾದಕ್ಕೆ ಕಾರಣವಾಗಿದೆ.

ಆರೋಗ್ಯ ಸಚಿವೆ ವೀಣಾ ಜಾರ್ಜ್ ರಾಜೀನಾಮೆಗೆ ಒತ್ತಾಯಿಸಿ ರಾಜ್ಯಾದ್ಯಂತ ಪ್ರತಿಭಟನೆಗಳು ನಡೆಯುತ್ತಿವೆ.

ಎಡಪಕ್ಷಗಳು ಲಾಗಾಯ್ತಿನಿಂದ ಹೇಳುತ್ತಿರುವ ಫ್ಯಾಪಿಸ್ಟ್ ಅಮೆರಿಕಾಕ್ಕೇ ಚಿಕಿತ್ಸೆಗೆ ಪಿಣರಾಯಿ ವಿಜಯನ್ ತೆರಳುತ್ತಿರುವುದು ದೌರ್ಭಾಗ್ಯಕರವೆಂದು ವಿಶ್ಲೇಷಕರು ಅಭಿಪ್ರಾಯಪಟ್ಟಿದ್ದಾರೆ.


ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

Below Post Ad

Qries