HEALTH TIPS

ಸಂಸತ್ ಅಧಿವೇಶನ: ಆಪರೇಷನ್ ಸಿಂಧೂರ್ ಬಗ್ಗೆ ಪ್ರತಿಪಕ್ಷಗಳ ಗದ್ದಲ, ಕಲಾಪ ದಿನದ ಮಟ್ಟಿಗೆ ಮುಂದೂಡಿಕೆ

ನವದೆಹಲಿ: ಸಂಸತ್ತಿನ ಮುಂಗಾರು ಅಧಿವೇಶನ ಸೋಮವಾರ ಆರಂಭವಾಗಿದ್ದು, ಕಾಂಗ್ರೆಸ್ ಮತ್ತು ಇತರ ವಿರೋಧ ಪಕ್ಷಗಳ ಹಲವಾರು ಸಂಸದರು ಪಹಲ್ಗಾಮ್ ದಾಳಿ ಮತ್ತು ಆಪರೇಷನ್ ಸಿಂಧೂರ್ ಕುರಿತು ಚರ್ಚೆಗಾಗಿ ಪಟ್ಟು ಹಿಡಿದವು. ಪ್ರತಿಪಿಕ್ಷಗಳ ಗದ್ದಲದ ನಡುವೆ ಉಭಯ ಸದನಗಳನ್ನು ಮೊದಲು ಮಧ್ಯಾಹ್ನ 12ಕ್ಕೆ ಮತ್ತು ದಿನದ ಮಟ್ಟಿಗೆ ಮುಂದೂಡಲಾಯಿತು.

ಪಹಲ್ಗಾಮ್ ಭಯೋತ್ಪಾದಕ ದಾಳಿ ಮತ್ತು ಏರ್ ಇಂಡಿಯಾ AI-171 ವಿಮಾನ ಪತನದಲ್ಲಿ ಮೃತಪಟ್ಟವರಿಗೆ ಶ್ರದ್ಧಾಂಜಲಿ ಸಲ್ಲಿಸುವ ಮೂಲಕ ಇಂದು ಸಂಸತ್ ಮಳೆಗಾಲದ ಅಧಿವೇಶನ ಆರಂಭವಾಗಿದೆ.

ಸಂತಾಪ ಸೂಚಕದ ನಂತರ, ಕಾಂಗ್ರೆಸ್ ನೇತೃತ್ವದ ವಿರೋಧ ಪಕ್ಷದ ಸದಸ್ಯರು ಎದ್ದು ನಿಂತು, ಪಹಲ್ಗಾಮ್ ಭಯೋತ್ಪಾದಕ ದಾಳಿಯ ನಂತರ ಭಾರತೀಯ ಸಶಸ್ತ್ರ ಪಡೆಗಳು ಪಾಕಿಸ್ತಾನದ ಮೇಲೆ ದಾಳಿ ನಡೆಸಿದ ಆಪರೇಷನ್ ಸಿಂದೂರ್ ಬಗ್ಗೆ ಚರ್ಚೆ ನಡೆಸುವಂತೆ ಒತ್ತಾಯಿಸಿ ಬಲವಾದ ಪ್ರತಿಭಟನೆ ನಡೆಸಿದರು.

"ಸರ್ಕಾರ ಪ್ರತಿಯೊಂದು ವಿಷಯಕ್ಕೂ ಉತ್ತರಿಸಲು ಬಯಸುತ್ತದೆ. ನೀವು ಘೋಷಣೆಗಳನ್ನು ಕೂಗಲು ಇಲ್ಲಿಗೆ ಬಂದಿಲ್ಲ. ಸದನವು ನಿಯಮಗಳು ಮತ್ತು ನಿಯಮಗಳ ಪ್ರಕಾರ ಕಾರ್ಯನಿರ್ವಹಿಸುತ್ತದೆ. ನಿಯಮಗಳ ಪ್ರಕಾರ ಎತ್ತಲಾದ ಎಲ್ಲಾ ವಿಷಯಗಳನ್ನು ಚರ್ಚಿಸಲಾಗುವುದು" ಎಂದು ಹೇಳಿದ ಸ್ಪೀಕರ್ ಓಂ ಬಿರ್ಲಾ, ಸುಗಮ ಕಲಾಪಕ್ಕೆ ಅವಕಾಶ ನೀಡಬೇಕು ಎಂದು ಸಂಸದರನ್ನು ಕೇಳಿಕೊಂಡರು.

"ಪ್ರಶ್ನೋತ್ತರ ಅವಧಿಯ ನಂತರ ಎಲ್ಲಾ ವಿಷಯಗಳನ್ನು ಎತ್ತಲು ನಾನು ನಿಮಗೆ ಅವಕಾಶ ನೀಡುತ್ತೇನೆ. ಸದನವು ನಿಯಮಗಳು ಮತ್ತು ನಿಯಮಗಳ ಮೂಲಕ ಮಾತ್ರ ಕಾರ್ಯನಿರ್ವಹಿಸುತ್ತದೆ. ಇದು ಘೋಷಣೆಗಳನ್ನು ಕೂಗಲು ಮತ್ತು ಫಲಕಗಳನ್ನು ಎತ್ತಲು ಅನುಮತಿಸುವುದಿಲ್ಲ" ಎಂದು ಅವರು ಹೇಳಿದರು.

ಆದಾಗ್ಯೂ, ವಿರೋಧ ಪಕ್ಷದ ಸದಸ್ಯರು ತಮ್ಮ ಪ್ರತಿಭಟನೆಗಳನ್ನು ಮುಂದುವರೆಸಿದರು ಮತ್ತು ಆಪರೇಷನ್ ಸಿಂದೂರ್ ಬಗ್ಗೆ ಚರ್ಚೆ ನಡೆಸುವಂತೆ ಒತ್ತಾಯಿಸಿ ಕೇಂದ್ರ ಸರ್ಕಾರದ ವಿರುದ್ಧ ಘೋಷಣೆ ಕೂಗಿ ಗದ್ದಲ ಸೃಷ್ಟಿಸಿದರು. ಇದರಿಂದಾಗಿ ಕಲಾಪ ಮಧ್ಯಾಹ್ನ 12 ಗಂಟೆಯವರೆಗೆ ಮುಂದೂಡಲ್ಪಟ್ಟಿತು.

ಪಹಲ್ಗಾಮ್ ದಾಳಿ, ಆಪರೇಷನ್ ಸಿಂಧೂರ್ ನಂತರ ಪಾಕಿಸ್ತಾನದೊಂದಿಗೆ ಕದನ ವಿರಾಮಕ್ಕೆ ಮಧ್ಯಸ್ಥಿಕೆ ವಹಿಸಿರುವುದಾಗಿ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರ ಪುನರಾವರ್ತಿತ ಹೇಳಿಕೆ ಬಗ್ಗೆ ಚರ್ಚೆಯಾಗಬೇಕು ಎಂದು ಪ್ರತಿಪಕ್ಷ ಕಾಂಗ್ರೆಸ್ ನ ಹಲವು ಸಂಸದರು ನಿಲುವಳಿ ಸೂಚನೆ ಮಂಡಿಸಿದ್ದಾರೆ.

ಆಪರೇಷನ್ ಸಿಂಧೂರ್ ಬಗ್ಗೆ ಚರ್ಚೆಯಾಗಬೇಕು

ಪ್ರಧಾನಿ ನರೇಂದ್ರ ಮೋದಿ ಅವರು ಆಪರೇಷನ್ ಸಿಂಧೂರ್ ಅನ್ನು 'ವಿಜಯ್ ಉತ್ಸವ' ಎಂದು ಶ್ಲಾಘಿಸಿದ್ದು, ಈ ಕುರಿತು "ಚರ್ಚೆ ನಡೆಯಬೇಕು ಎಂಬುದು ನಮ್ಮ ಬೇಡಿಕೆ. ಇದು ಒಂದು ಪ್ರಮುಖ ವಿಷಯ. ನಮಗೆ ನಮ್ಮ ದೇಶದ ಬಗ್ಗೆ ಹೆಮ್ಮೆ ಇದೆ. ಪ್ರಧಾನಿ ಬಂದು ಹೇಳಿಕೆ ನೀಡಬೇಕು" ಎಂದು ಕಾಂಗ್ರೆಸ್ ಸಂಸದ ಕೆ.ಸಿ. ವೇಣುಗೋಪಾಲ್ ಆಗ್ರಹಿಸಿದರು.

ಪ್ರಧಾನಿ ನರೇಂದ್ರ ಮೋದಿ, ಕೇಂದ್ರ ಗೃಹ ಸಚಿವ ಅಮಿತ್ ಶಾ, ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಸೇರಿದಂತೆ ಹಲವರು ಸದನದಲ್ಲಿ ಹಾಜರಿದ್ದರು.

ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

Below Post Ad

Qries