HEALTH TIPS

ಅಂಗವಿಕಲರು ಸೌಲಭ್ಯ ಪಡೆಯಲು ಆಧಾರ್ ಕಡ್ಡಾಯ: ಕೇಂದ್ರ ಸರ್ಕಾರ

ನವದೆಹಲಿ: ಕೌಶಲಾಭಿವೃದ್ಧಿ ಯೋಜನೆಯಡಿ ಸೌಲಭ್ಯಗಳನ್ನು ಪಡೆಯಲು ಅಂಗವಿಕಲರು ಆಧಾರ್‌ ಸಂಖ್ಯೆ ಅಥವಾ ಅದಕ್ಕೆ ಅರ್ಜಿ ಸಲ್ಲಿಸಿದ ದಾಖಲೆ ನೀಡುವುದನ್ನು ಕೇಂದ್ರ ಸರ್ಕಾರ ಕಡ್ಡಾಯಗೊಳಿಸಿದೆ.

ಆಧಾರ್‌ ಇಲ್ಲದಿದ್ದರೆ ಅಥವಾ ದೃಢೀಕರಣ ವಿಫಲವಾದ ಕಾರಣಕ್ಕೆ ಯಾವುದೇ ಅಂಗವಿಕಲ ಮಕ್ಕಳನ್ನು ಸೌಲಭ್ಯದಿಂದ ವಂಚಿತಗೊಳಿಸುವುದಿಲ್ಲ ಎಂದು ಸಾಮಾಜಿಕ ನ್ಯಾಯ ಮತ್ತು ಸಬಲೀಕರಣ ಸಚಿವಾಲಯ ತಿಳಿಸಿದೆ.

ಪ್ರಯಾಣ ಮತ್ತು ವಸತಿ ಭತ್ಯೆ, ನೇಮಕಾತಿ ಬಳಿಕದ ನೆರವು ಸೇರಿದಂತೆ ನಗದು ಸೌಲಭ್ಯಗಳನ್ನು ಪಡೆಯಲು ಆಧಾರ್‌ ದೃಢೀಕರಣ ಅತ್ಯಗತ್ಯವಾಗಿರುತ್ತದೆ ಎಂದು ಸಚಿವಾಲಯದ ಪ್ರಕಟಣೆ ತಿಳಿಸಿದೆ.

ಅಂಗವಿಕಲರ ಕೌಶಲಭಿವೃದ್ಧಿಗಾಗಿ ರಾಷ್ಟ್ರೀಯ ಕ್ರಿಯಾ ಯೋಜನೆ (ಎನ್‌ಎಪಿ-ಎಸ್‌ಡಿಪಿ)ಯನ್ನು 2015ರಲ್ಲಿ ಜಾರಿಗೊಳಿಸಲಾಗಿದೆ. ಈ ಯೋಜನೆಯಡಿ ಅಂಗವಿಕಲರಿಗೆ ಉತ್ತಮ ಗುಣಮಟ್ಟದ ತರಬೇತಿಯನ್ನು ನೀಡಿ ಅವರು ಉದ್ಯೋಗ ಪಡೆಯುವಂತೆ ಮಾಡಲಾಗುತ್ತದೆ. ಅಂಗವಿಕಲರಿಗಾಗಿ ಆಧಾರ್‌ ನೋಂದಣಿ ಕೇಂದ್ರ ತೆರೆಯುವಂತೆ ಸಂಬಂಧಿಸಿದ ಸಂಸ್ಥೆಗಳಿಗೆ ಸಚಿವಾಲಯ ನಿರ್ದೇಶನ ನೀಡಿದೆ.

ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

Below Post Ad

Qries