HEALTH TIPS

ಇಂದು ಯಕ್ಷಗಾನ ತರಬೇತಿ ಸಮಾರೋಪ ಸಮಾರಂಭ, ಯಕ್ಷಗಾನ ಬಯಲಾಟ

ಕಾಸರಗೋಡು: ಕೋಟೆಕಣಿ ಶ್ರೀ ರಾಮನಾಥ ಸಾಂಸ್ಕøತಿಕ ಭವನ ಸಮಿತಿ ವತಿಯಿಂದ ಬೆಂಗಳೂರಿನ ಕರ್ನಾಟಕ ಯಕ್ಷಗಾನ ಅಕಾಡಮಿ ಸಹಯೋಗದೊಂದಿಗೆ ಆಯೋಜಿಸಲಾಗಿರುವ ಯಕ್ಷಗಾನ ತರಬೇತಿ ಸಮಾರೋಪ ಸಮಾರಂಭ ಜುಲೈ 12ರಂದು ಸಂಜೆ 5.30ಕ್ಕೆ ಕಾಸರಗೋಡು ಕೋಟೆಕಣಿ ಶ್ರೀರಾಮನಾಥ ಸಾಂಸ್ಕøತಿಕ ಭವನ ಸಭಾಂಗಣದಲ್ಲಿ ಜರುಗಲಿದೆ.

ಕಾಸರಗೋಡು ಶ್ರೀ ವೆಂಕಟ್ರಮಣ ಸ್ವಾಮಿ ಕೃಪಾಶ್ರಿತ ಯಕ್ಷಗಾನ ಕಲಾಸಂಘದ ವ್ಯವಸ್ತಾಪಕ ಡಾ. ಕೆ.ಎನ್ ವೆಂಕಟ್ರಮಣ ಹೊಳ್ಳ ಕಾಸರಗೋಡು ಸಮಾರಂಭದ ಅಧ್ಯಕ್ಷತೆ ವಹಿಸುವರು. ಕರ್ನಾಟಕ ಯಕ್ಷಗಾನ ಅಕಾಡಮಿ ಅಧ್ಯಕ್ಷ ಡಾ. ತಲ್ಲೂರು ಶಿವರಾಮ ಶೆಟ್ಟಿ ಮುಖ್ಯ ಅತಿಥಿಯಾಗಿ ಭಾಗವಹಿಸುವರು. ಅಕಾಡಮಿ ಸದಸ್ಯ, ಯಕ್ಷಗಾನ ಕಲಾವಿದ ಸತೀಶ ಅಡಪ ಸಂಕಬೈಲು ಹಾಗೂ ಯಕ್ಷಗುರು ಜಯರಾಮ ಪಾಟಾಳಿ ಪಡುಮಲೆ ಅಬ್ಯಾಗತರಾಗಿ ಭಾಗವಹಿಸುವರು.  ಕಾರ್ಯಕ್ರಮದ ಅಂಗವಾಗಿ ತರಬೇತಿ ಕೇಂದ್ರದ ವಿದ್ಯಾರ್ಥಿಗಳಿಂದ ಗಜೇಂದ್ರ ಮೋಕ್ಷ ಯಕ್ಷಗಾನ ಬಯಲಾಟ ಜರುಗಲಿರುವುದು.


ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

Below Post Ad

Qries