HEALTH TIPS

ಶ್ರೀ ಭಾರತಿ ವಿದ್ಯಾ ಪೀಠದಲ್ಲಿ ರಾಮಾಯಣ ಮಾಸಾಚರಣೆ

ಕುಂಬಳೆ: ಮುಜುಂಗಾವು ಶ್ರೀಭಾರತಿ ವಿದ್ಯಾಪೀಠದಲ್ಲಿ ರಾಮಾಯಣ ಮಾಸಾಚರಣೆಯನ್ನು ವಿಶೇಷ ರೀತಿಯಲ್ಲಿ ಬುಧವಾರ ಪ್ರಾರಂಭಿಸಲಾಯಿತು. ಬೆಳಗ್ಗೆ 9:30ಕ್ಕೆ ಶ್ರೀ ರಾಮನ ವಿಗ್ರಹದ ಆಗಮನದೊಂದಿಗೆ ಕಾರ್ಯಕ್ರಮವು ಪ್ರಾರಂಭವಾಯಿತು. ಯೋಗಾಚಾರ್ಯ ಪುಂಡರೀಕಾಕ್ಷ ಬೆಳ್ಳೂರು ಅವರು  ರಾಮಾಯಣದ ಜೀವನ ಮೌಲ್ಯಗಳನ್ನು ರಾಮಕಥಾ ಸತ್ಸಂಗದ ಮೂಲಕ ತಿಳಿಸಿದರು. 

ಕಾರ್ಯಕ್ರಮದಲ್ಲಿ ಆಡಳಿತ ಸೇವಾಸಮಿತಿ ಪದಾಧಿಕಾರಿಗಳು, ಶಾಲಾ ಮುಖ್ಯೋಪಾಧ್ಯಾಯರು, ಅಧ್ಯಾಪಕರು ಹಾಗೂ ರಕ್ಷಕರು ಉಪಸ್ಥಿತರಿದ್ದರು. ಮಧ್ಯಾಹ್ನ ಭಜನೆ, ಮಹಾಮಂಗಳಾರತಿ, ಪ್ರಸಾದ ವಿತರಣೆಯೊಂದಿಗೆ ಕಾರ್ಯಕ್ರಮವು ಮುಕ್ತಾಯಗೊಂಡಿತು.



ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

Below Post Ad

Qries