HEALTH TIPS

ನ್ಯಾಯಾಂಗದಲ್ಲಿ ಹಸ್ತಕ್ಷೇಪ ಸಲ್ಲದು: ಸಿಜೆಐ ಬಿ.ಆರ್‌.ಗವಾಯಿ

ಮುಂಬೈ: 'ನ್ಯಾಯಾಂಗವು ಕಾರ್ಯಾಂಗದ ಹಸ್ತಕ್ಷೇಪದಿಂದ ಸಂಪೂರ್ಣವಾಗಿ ಮುಕ್ತವಾಗಿರಬೇಕು ಎಂದು ಡಾ.ಬಿ.ಆರ್‌.ಅಂಬೇಡ್ಕರ್ ಬಯಸಿದ್ದರು' ಎಂದು ಸುಪ್ರೀಂ ಕೋರ್ಟ್‌ನ ಮುಖ್ಯ ನ್ಯಾಯಮೂರ್ತಿ ಭೂಷಣ್‌ ರಾಮಕೃಷ್ಣ ಗವಾಯಿ ಅವರು ಅಭಿಪ್ರಾಯಪಟ್ಟರು.

ಸುಪ್ರೀಂ ಕೋರ್ಟ್‌ನ ಮುಖ್ಯ ನ್ಯಾಯಮೂರ್ತಿಯಾಗಿ ಪದೋನ್ನತಿ ಹೊಂದಿದ್ದ ಗವಾಯಿ ಅವರಿಗೆ ಮಹಾರಾಷ್ಟ್ರ ವಿಧಾನಸಭೆಯಲ್ಲಿ ಆಯೋಜಿಸಿದ್ದ ಸನ್ಮಾನ ಕಾರ್ಯಕ್ರಮದಲ್ಲಿ ಭಾಗವಹಿಸಿ ಅವರು ಮಾತನಾಡಿದರು.

'ಶಾಂತಿ ಹಾಗೂ ಯುದ್ಧದ ಸಮಯದಲ್ಲಿಯೂ ದೇಶವನ್ನು ಒಗ್ಗಟ್ಟಿನಿಂದ ಇಡುವ ದೇಶದ ಸಂವಿಧಾನ ಶ್ರೇಷ್ಠತೆಯನ್ನು ನಾವೆಲ್ಲರೂ ನಂಬುತ್ತೇವೆ ಎಂದು ಅಂಬೇಡ್ಕರ್‌ ಹೇಳಿದ್ದರು. ಸಂವಿಧಾನವು ಕಾರ್ಯಾಂಗ, ಶಾಸಕಾಂಗ ಹಾಗೂ ನ್ಯಾಯಾಂಗಕ್ಕೆ ಹಕ್ಕುಗಳನ್ನು ನೀಡಿದೆ. ಅಂಬೇಡ್ಕರ್‌ ಅವರ ಪ್ರಕಾರ, ನ್ಯಾಯಾಂಗವು ನಾಗರಿಕರ ಹಕ್ಕುಗಳ ರಕ್ಷಕರಾಗಿದ್ದು, ಕಾವಲುನಾಯಿಯಂತೆ ಕೆಲಸ ಮಾಡಬೇಕು. ಸಂವಿಧಾನವು ಸ್ಥಿರವಾಗಿರಲು ಸಾಧ್ಯವಿಲ್ಲ, ಸದ ವಿಕಸನಗೊಳ್ಳುತ್ತಿರಬೇಕು ಎಂದು ಬಯಸಿದ್ದರು' ಎಂದು ಗವಾಯಿ ತಿಳಿಸಿದರು.

ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

Below Post Ad

Qries