ಬದಿಯಡ್ಕ: 38ನೇ ಎಡನೀರು ಸಾರ್ವಜನಿಕ ಶ್ರೀ ಗಣೇಶೋತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆ ಸಮಾರಂಭವು ಪರಮಪೂಜ್ಯ ಶ್ರೀ ಸಚ್ಚಿದಾನಂದ ಭಾರತಿ ಶ್ರೀಪಾದಂಗಳವರ ಆಶೀರ್ವಾದದೊಂದಿಗೆ ಶನಿವಾರ ಶ್ರೀಮಠದಲ್ಲಿ ನಡೆಯಿತು. ಖ್ಯಾತ ಯಕ್ಷಗಾನ ಕಲಾವಿದ ಉಜಿರೆ ಅಶೋಕ್ ಭಟ್, ಎಡನೀರು ಮಠದ ವ್ಯವಸ್ಥಾಪಕ ರಾಜೇಂದ್ರ ಕಲ್ಲೂರಾಯ, ಸ್ಥಾಯಿ ಸಮಿತಿಯ ಅಧ್ಯಕ್ಷ ಕೆ ಮಾಧವ ಹೇರಳ ಕಳೇರಿ, ಉತ್ಸವ ಸಮಿತಿಯ ಅಧ್ಯಕ್ಷ ಶಾಂತ ಟೀಚರ್, ಮಾತೃ ಸಮಿತಿ ಅಧ್ಯಕ್ಷೆ ಪ್ರಭಾ ಕಲ್ಲೂರಾಯ ಹಾಗೂ ಸಮಿತಿಯ ಇತರ ಪದಾಧಿಕಾರಿಗಳು ಉಪಸ್ಥಿತರಿದ್ದರು.

.jpg)
