ಜೈಪುರ: ಗ್ರ್ಯಾಮಿ ಪ್ರಶಸ್ತಿ ಪುರಸ್ಕೃತ ಪಂಡಿತ್ ವಿಶ್ವ ಮೋಹನ ಭಟ್ ಮತ್ತು ಅವರ ಪುತ್ರ, ಸಾತ್ವಿಕ್ ವೀಣಾ ಸೃಷ್ಟಿಕರ್ತ ಪಂಡಿತ್ ಸಲೀಲ್ ಭಟ್ ಅವರು ಜಿನೀವಾದಲ್ಲಿರುವ ವಿಶ್ವಸಂಸ್ಥೆಯ ಪ್ರಧಾನ ಕಚೇರಿಯಲ್ಲಿ ಮಂಗಳವಾರ ಭಾರತೀಯ ಶಾಸ್ತ್ರೀಯ ಸಂಗೀತದ ಕಛೇರಿ ನಡೆಸಿಕೊಟ್ಟರು.
ವಿಶ್ವ ಬೌದ್ಧಿಕ ಆಸ್ತಿ ಸಂಸ್ಥೆ ಮತ್ತು ಭಾರತದ ನಡುವಿನ ಸಹಕಾರದ ಸುವರ್ಣ ಮಹೋತ್ಸವದ ಅಂಗವಾಗಿ ಜಿನೀವಾದಲ್ಲಿನ ಭಾರತೀಯ ರಾಯಭಾರ ಕಚೇರಿ ಮತ್ತು ಭಾರತೀಯ ಸಾಂಸ್ಕೃತಿಕ ಸಂಬಂಧಗಳ ಮಂಡಳಿಯ ಬೆಂಬಲದೊಂದಿಗೆ ಜುಲೈ 8ರಂದು ಈ ವಿಶೇಷ ಸಂಗೀತ ಕಾರ್ಯಕ್ರಮ ನಡೆಯಿತು.
190ಕ್ಕೂ ಹೆಚ್ಚು ದೇಶಗಳ ರಾಜತಾಂತ್ರಿಕರು, ಸಚಿವರು ಹಾಗೂ ಸಾಂಸ್ಕೃತಿಕ ಲೋಕದ ಗಣ್ಯರು ಉಪಸ್ಥಿತರಿದ್ದರು.




