HEALTH TIPS

'ಉತ್ತಮ ಆಹಾರ, ಉತ್ತಮ ಆರೋಗ್ಯ' ಯೋಜನೆ-ತರಕಾರಿ ಸಸಿಗಳ ವಿತರಣೆ

ಕಾಸರಗೋಡು: ಪರಪ್ಪ ಬ್ಲಾಕ್ ಪಂಚಾಯತ್ ವಾರ್ಷಿಕ ಯೋಜನೆಯ ಅಂಗವಾಗಿ ಸಾರ್ವಜನಿಕರಿಗೆ ಪೌಷ್ಟಿಕ ಮತ್ತು ಸುರಕ್ಷಿತ ಆಹಾರದ ಮಹತ್ವದ ಬಗ್ಗೆ ಅರಿವು ಮೂಡಿಸಲು ಜಾರಿಗೆ ತರಲಾಗುತ್ತಿರುವ 'ಉತ್ತಮ ಆಹಾರ, ಉತ್ತಮ ಆರೋಗ್ಯ' ಯೋಜನೆಯ ಬ್ಲಾಕ್ ಮಟ್ಟದ ಉದ್ಘಾಟನೆ ಬ್ಲಾಕ್ ಪಂಚಾಯಿತಿಯಲ್ಲಿ ಜರುಗಿತು.

ಕಿನನೂರಿನ ಕರಿಂದಲಂ ಗ್ರಾಮ ಪಂಚಾಯಿತಿಯಲ್ಲಿರುವ ಕೃಷಿ ಸೇವಾ ಕೇಂದ್ರದಲ್ಲಿ ನಡೆದ ಕಾರ್ಯಕ್ರಮದಲ್ಲಿ ಗ್ರಾಪಂ ಅಧ್ಯಕ್ಷೆ ಎಂ.ಲಕ್ಷ್ಮಿ ಅಧ್ಯಕ್ಷತೆ ವಹಿಸಿದ್ದರು. ಬ್ಲಾಕ್ ಪಂಚಾಯಿತಿ ಉಪಾಧ್ಯಕ್ಷ ಕೆ. ಭೂಪೇಶ್ ಅಧ್ಯಕ್ಷತೆ ವಹಿಸಿದ್ದರು. ಸಹಾಯಕ ಕೃಷಿ ನಿರ್ದೇಶಕ ನಿಖಿಲ್ ನಾರಾಯಣನ್ ಅವರು ಯೋಜನೆಯ ಬಗ್ಗೆ ಮಾಹಿತಿ ನೀಡಿದರು.

ಐಸಿಎಂಆರ್ ಮಾರ್ಗಸೂಚಿಗಳ ಪ್ರಕಾರ ತರಕಾರಿ ಉತ್ಪಾದನೆಯಲ್ಲಿ ಸಾರ್ವಜನಿಕ ಭಾಗವಹಿಸುವಿಕೆಯನ್ನು ಹೆಚ್ಚಿಸುವುದರ ಜತೆಗೆ ಜನರ ಆಹಾರದಲ್ಲಿ ಹೆಚ್ಚಿನ ತರಕಾರಿ ಸೇರಿಸುವುದು ಮತ್ತು ಸುರಕ್ಷಿತ ಆಹಾರ ಉತ್ಪಾದನಾ ವಿಧಾನಗಳನ್ನು ಉತ್ತೇಜಿಸುವುದು ಈ ಯೋಜನೆಯ ಪ್ರಮುಖ ಉದ್ದೇಶಗಳಾಗಿವೆ. ಯೋಜನೆಯ ಅಂಗವಾಗಿ, ಜನರಿಗೆ ತರಬೇತಿ ಮತ್ತು ಜಾಗೃತಿ ತರಗತಿಗಳನ್ನು ನಡೆಸಲಾಗುವುದು. ಇದಕ್ಕಾಗಿ ಆರೋಗ್ಯ, ಕೃಷಿ ಸೇರಿದಂತೆ ವಿವಿಧ ಇಲಾಖೆಗಳು ಒಟ್ಟಾಗಿ ಕೆಲಸ ಮಾಡಲಿದೆ. 

ಸಭೆಯಲ್ಲಿ ಬ್ಲಾಕ್ ಪಂಚಾಯತ್ ಅಭಿವೃದ್ಧಿ ಸ್ಥಾಯಿ ಸಮಿತಿ ಅಧ್ಯಕ್ಷೆ ರಜಿನಿ ಕೃಷ್ಣನ್, ಬಿಡಿಒ ಬಿಜು ಕುಮಾರ್, ಕೃಷಿ ಸೇವಾಕೇಂದ್ರದ ಸಹಾಯಕ ಮೋಹನನ್ ಮತ್ತು ವಾರ್ಡ್ ಸದಸ್ಯರಾದ ಕೈರಲಿ ಮತ್ತು ಧನ್ಯಾ ಉಪಸ್ಥಿತರಿದ್ದರು. ಕಿನನೂರು ಕರಿಂದಲಂ ಕೃಷಿ ಅಧಿಕಾರಿ ಜೆ. ಜಿಜಿ ಸ್ವಾಗತಿಸಿದರು. ಸಹಾಯಕ ಕೃಷಿ ಅಧಿಕಾರಿ ಸದಾನಂದನ್ ವಂದಿಸಿದರು. ಈ ಸಂದರ್ಭ ತರಕಾರಿ ಸಸಿಗಳ ವಿತರಣೆ ನಡೆಯಿತು. 



ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

https://drive.google.com/file/d/1xvTBLBh0henjhvlJCaNItofEXO_RJIZu/view?usp=sharing

Below Post Ad

https://drive.google.com/file/d/1xvTBLBh0henjhvlJCaNItofEXO_RJIZu/view?usp=sharing

HOTEL

HOTEL
CENTURY
Qries